ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ
Three youths rescued a mother and her daughter who attempted suicide by jumping into the Varada River near Chandragutti in Soraba, Shivamogga.
ಸೊರಬ: ಕುಟುಂಬ ಕಲಹದಿಂದ ಮನನೊಂದು ತನ್ನ ಸಣ್ಣ ಮಗಳೊಂದಿಗೆ ವರದಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಹಾಗೂ ಮಗುವನ್ನು ಮೂವರು ಯುವಕರು ಸಮಯಪ್ರಜ್ಞೆ ಮೆರೆದು ರಕ್ಷಿಸಿರುವ ಘಟನೆ ಚಂದ್ರಗುತ್ತಿ ಸಮೀಪ ನಡೆದಿದೆ.
ಪತಿ-ಪತ್ನಿ ನಡುವಿನ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮಗಳೊಂದಿಗೆ ಚಂದ್ರಗುತ್ತಿ ಸಮೀಪದ ವರದಾ ನದಿಯ ದಡಕ್ಕೆ ತೆರಳಿದ್ದರು. ಈ ವೇಳೆ ಮಹಿಳೆ ಮಗುವನ್ನು ನೀರಿಗೆ ತಳ್ಳಲು ಯತ್ನಿಸಿದ್ದು, ಮಗು ಜೋರಾಗಿ ಚೀರಿಕೊಂಡಿದೆ.
ಮಗುವಿನ ಆಕ್ರಂದನ ಕೇಳಿದ ಸ್ಥಳೀಯರು ನೆರವಿಗೆ ಧಾವಿಸಿದ್ದು, ಇದೇ ವೇಳೆ ನದಿಯಲ್ಲಿ ಮೀನು ಹಿಡಿಯುತ್ತಿದ್ದ ಚಿಕ್ಕಮಾಕೊಪ್ಪ ಗ್ರಾಮದ ಸಾಹಿಲ್, ಸೋನು ಹಾಗೂ ಯಾಸಿನ್ ಎಂಬ ಮೂವರು ಯುವಕರು ತಕ್ಷಣ ನದಿಗೆ ಧುಮುಕಿದ್ದಾರೆ. ಅಪಾಯದಲ್ಲಿದ್ದ ತಾಯಿ ಹಾಗೂ ಮಗಳಿಬ್ಬರನ್ನೂ ಸುರಕ್ಷಿತವಾಗಿ ದಡಕ್ಕೆ ಕರೆತಂದು ಜೀವ ಉಳಿಸಿದ್ದಾರೆ.
ಯುವಕರ ಸಮಯಪ್ರಜ್ಞೆ ಹಾಗೂ ಧೈರ್ಯವನ್ನು ಮೆಚ್ಚಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಸೊರಬ ಪೊಲೀಸ್ ಠಾಣೆಯ ವತಿಯಿಂದ ಮೂವರನ್ನೂ ಗೌರವಿಸಿ ಸನ್ಮಾನಿಸಲಾಯಿತು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…