ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

Nagarahalli Nagendra Swamy Temple in Hosanagara taluk celebrated Nagara Panchami with special rituals, abhisheka, Nagabali and Ashtanagarchane amid thousands of devotees.

ನಾಗರಹಳ್ಳಿ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವ ಹಾಗೂ ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದುಬಂದಿದ್ದು, ದೇವರ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು.

ನಾಗರ ಪಂಚಮಿ ಅಂಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು ಮತ್ತು ಸಕ್ಕರೆಯಿಂದ ಆರಾಧನೆ ಸೇರಿದಂತೆ ಹಲವು ಪೂಜಾ ಸೇವೆಗಳನ್ನು ಭಕ್ತಿಪೂರ್ವಕವಾಗಿ ನೆರವೇರಿಸಲಾಯಿತು.

ಇದರೊಂದಿಗೆ ನಾಗಬಲಿ, ಅಷ್ಟನಾಗಾರ್ಚನೆ, ಸರ್ಪಸೂಕ್ತ ಪಾರಾಯಣ ಹಾಗೂ ನಾಮಸಂಕೀರ್ತನೆ ಸೇರಿದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಸ್ಥಾನದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತರ ಸಂಚಾರ ಹೆಚ್ಚಾಗಿದ್ದು, ಹಬ್ಬದ ಹಿನ್ನೆಲೆಯಲ್ಲಿ ಭಕ್ತಿಯ ವಾತಾವರಣ ಮನೆಮಾಡಿತ್ತು.

ನಾಗೇಂದ್ರಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಭಕ್ತರು, ತಮ್ಮ ಕುಟುಂಬದ ಒಳಿತಿಗಾಗಿ ಪ್ರಾರ್ಥಿಸಿದರು. ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು.

ಭಕ್ತರ ಹೆಚ್ಚಿನ ಸಂಖ್ಯೆಯ ಆಗಮನದ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಭಕ್ತರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ಸಹಕರಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

1 hour ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

2 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

22 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

1 day ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

1 day ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

1 day ago