ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ
Narayan Guru Jayanti and Onam celebration held at Ripponpete Tilak Mantapa. Nittoor Renukananda Swamiji highlighted Narayan Guru’s message of social equality, education and empowerment.
ರಿಪ್ಪನ್ಪೇಟೆ: ಮನುಕುಲದ ಸಾಮಾಜಿಕ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯ ಮೂಲಕ ಶೋಷಿತ ಸಮುದಾಯಗಳಿಗೆ ಬೆಳಕು ನೀಡಿದ ಮಹಾನ್ ಚೇತನ ನಾರಾಯಣ ಗುರುಗಳು ಎಂದು ನಿಟ್ಟೂರು ರೇಣುಕಾನಂದ ಸ್ವಾಮೀಜಿ ಹೇಳಿದರು.
ರಿಪ್ಪನ್ಪೇಟೆಯ ತಿಲಕ್ ಮಂಟಪದಲ್ಲಿ ನಾರಾಯಣ ಮಿಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 170ನೇ ವರ್ಷದ ನಾರಾಯಣ ಗುರು ಜಯಂತ್ಯೋತ್ಸವ ಹಾಗೂ ಓಣಂ ಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯರೆಲ್ಲರೂ ಸಮಾನರು ಎಂಬ ತತ್ವವನ್ನು ನಾರಾಯಣ ಗುರುಗಳು ಸಮಾಜಕ್ಕೆ ಸಾರಿದರು ಎಂದು ತಿಳಿಸಿದರು.
“ಕುಡಿಯುವ ನೀರು ಒಂದೇ, ಹರಿಯುವ ರಕ್ತ ಒಂದೇ, ಸುರಿಯುವ ಮಳೆ ಒಂದೇ. ಆದರೆ ಮನುಷ್ಯ ಮಾತ್ರ ಭೇದಭಾವದ ಮೂಲಕ ಸಮಾಜವನ್ನು ಹಾಳುಗೆಡವಲು ಯತ್ನಿಸುತ್ತಾನೆ. ಇಂತಹ ಸಂದರ್ಭದಲ್ಲಿ ಯುಗಪುರುಷರು ಜನ್ಮ ತಾಳುತ್ತಾರೆ. ಕೇರಳದಲ್ಲಿ ಅಸಮಾನತೆಯ ವಿರುದ್ಧ ನಾರಾಯಣ ಗುರುಗಳು ಧ್ವನಿ ಎತ್ತಿ, ಶಿಕ್ಷಣದ ಮೂಲಕ ತಳ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದರು,” ಎಂದು ಹೇಳಿದರು.
ಅಂಧಕಾರ, ಅಸಮಾನತೆ ಹಾಗೂ ಸ್ತ್ರೀ ಶೋಷಣೆಯನ್ನು ಹೋಗಲಾಡಿಸಲು ಶಿಕ್ಷಣ, ಸಂಘಟನೆ ಮತ್ತು ಜ್ಞಾನ ಎಂಬ ಮಂತ್ರವನ್ನು ನಾರಾಯಣ ಗುರುಗಳು ಬೋಧಿಸಿದರು. ಮನುಷ್ಯರೆಲ್ಲರೂ ಒಂದೇ ಎಂಬ ತತ್ವದ ಮೂಲಕ ಸಮ ಸಮಾಜದ ಪರಿಕಲ್ಪನೆಗೆ ಅವರು ಬುನಾದಿ ಹಾಕಿದರು ಎಂದು ಸ್ವಾಮೀಜಿ ಹೇಳಿದರು.
ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮಾತನಾಡಿ, ಜಾತಿ, ಅಸ್ಪೃಶ್ಯತೆ ಹಾಗೂ ಅಸಮಾನತೆ ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲಿ ಆತ್ಮವಿಶ್ವಾಸ, ಶಿಕ್ಷಣ, ಸಂಘಟನೆ ಮತ್ತು ಸಾಮಾಜಿಕ ಸಮಾನತೆಯ ಅರಿವು ಮೂಡಿಸಿದ ಪ್ರಮುಖ ಸಮಾಜ ಸುಧಾರಕರಲ್ಲಿ ನಾರಾಯಣ ಗುರುಗಳು ಒಬ್ಬರು. ಅವರ ಪ್ರಯತ್ನಗಳಿಂದ ಬಿಲ್ಲವ ಸಮುದಾಯ ಸೇರಿದಂತೆ ಹಿಂದುಳಿದ ವರ್ಗಗಳಲ್ಲಿ ಶಿಕ್ಷಣ ಹಾಗೂ ಸಾಮಾಜಿಕ ಜಾಗೃತಿ ಹೆಚ್ಚಾಯಿತು ಎಂದರು.
ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಮಾತನಾಡಿ, ಕೇರಳದಲ್ಲಿ ಜಾತಿ ಪದ್ಧತಿಯ ವಿಷಬೀಜ ಆವರಿಸಿದ್ದ ಸಂದರ್ಭದಲ್ಲಿ ಅಸ್ಪೃಶ್ಯತೆ, ಅನಕ್ಷರತೆ ಹಾಗೂ ಅಸಮಾನತೆಯ ವಿರುದ್ಧ ನಾರಾಯಣ ಗುರುಗಳು ನಡೆಸಿದ ಹೋರಾಟ ಮತ್ತು ಸೇವೆ ಅನನ್ಯವಾದುದು. ತಾರತಮ್ಯಕ್ಕೆ ಒಳಗಾಗಿದ್ದ ಸಮುದಾಯಗಳ ಧ್ವನಿಯಾಗಿ ಅವರು ಹೊರಹೊಮ್ಮಿದರು ಎಂದು ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷ ಪಿ. ರಮೇಶ್ ಮಾತನಾಡಿ, ಸಂಘರ್ಷಕ್ಕೆ ಅವಕಾಶ ನೀಡದೆ ಮೌನಕ್ರಾಂತಿಯ ಮೂಲಕ ಸಮಾಜದಲ್ಲಿ ಬದಲಾವಣೆ ತಂದ ನಾರಾಯಣ ಗುರುಗಳು ದೂರದೃಷ್ಟಿಯ ಚಿಂತನೆಯೊಂದಿಗೆ ಶಿಕ್ಷಣದ ಮಹತ್ವವನ್ನು ಸಾರಿದರು. ಸಮಾಜದಲ್ಲಿನ ಮೌಢ್ಯಗಳನ್ನು ಹೋಗಲಾಡಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅವರ ಮೌಲ್ಯಗಳು ಎಂದಿಗೂ ಆದರ್ಶವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾ ಅಧ್ಯಕ್ಷ ಸುಧೀಂದ್ರ ಪೂಜಾರಿ, ಟ್ರಸ್ಟ್ನ ಶಾಖಾಧ್ಯಕ್ಷ ಸೋಮಶೇಖರ್, ಎನ್. ಸತೀಶ್, ಸುಂದರೇಶ್, ತ.ಮ. ನರಸಿಂಹ, ನಿರೂಪ್ ಕುಮಾರ್, ಚಂದ್ರಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…