ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

Small fire accident reported at Rahul Hyundai car showroom on Shankaram Road in Shivamogga. Firefighters quickly controlled the blaze, preventing a major mishap.

ಶಿವಮೊಗ್ಗ: ನಗರದ ಶಂಕರಮ ರಸ್ತೆಯಲ್ಲಿರುವ ರಾಹುಲ್ ಹುಂಡೈ ಕಾರು ಶೋರೂಮ್‌ನಲ್ಲಿ ಗುರುವಾರ ಸಂಜೆ ಸುಮಾರು 5.25ರ ವೇಳೆಗೆ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿದೆ.

ಶೋರೂಮ್‌ನ ಮುಂಭಾಗದಲ್ಲಿರುವ ನೇಮ್‌ಪ್ಲೇಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ತೀವ್ರತೆಗೆ ನೇಮ್‌ಪ್ಲೇಟ್‌ನಲ್ಲಿದ್ದ ಕನ್ನಡದ ಅಕ್ಷರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅದೇ ವೇಳೆ ನೇಮ್‌ಪ್ಲೇಟ್‌ನಲ್ಲಿದ್ದ ಇಂಗ್ಲಿಷ್ ಬರಹದ ಭಾಗ ಬಹುತೇಕ ಬೆಂಕಿಯಿಂದ ಪಾರಾಗಿದೆ.

ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಎರಡು ವರ್ಷಗಳ ಹಿಂದಿನ ಭೀಕರ ಅಗ್ನಿ ಅವಘಡದ ನೆನಪು

ರಾಹುಲ್ ಹುಂಡೈ ಶೋರೂಮ್‌ನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿರುವುದು ಎರಡು ವರ್ಷಗಳ ಹಿಂದಿನ ಭೀಕರ ಅಗ್ನಿ ಅವಘಡದ ನೆನಪನ್ನು ಮರುಕಳಿಸಿದೆ.

2024ರಲ್ಲಿ ಇದೇ ಶೋರೂಮ್‌ನಲ್ಲಿ ರಾತ್ರಿ ವೇಳೆ ಸಂಭವಿಸಿದ್ದ ಭೀಕರ ಅಗ್ನಿ ಅವಘಡದಲ್ಲಿ ಸರ್ವಿಸ್‌ಗೆ ಬಿಟ್ಟಿದ್ದ ಕಾರುಗಳು ಸೇರಿದಂತೆ ಶೋರೂಮ್‌ನಲ್ಲಿದ್ದ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು. ಬೆಂಕಿಯ ತೀವ್ರತೆಗೆ ಅನೇಕ ವಾಹನಗಳು ಸುಟ್ಟು ಕರಕಲಾಗಿದ್ದು, ಭಾರಿ ಪ್ರಮಾಣದ ಆಸ್ತಿ ನಷ್ಟ ಸಂಭವಿಸಿತ್ತು.

ಗುರುವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಯಾವುದೇ ದೊಡ್ಡ ಅನಾಹುತ ಸಂಭವಿಸದೆ, ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

5 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

5 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

7 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 day ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago