ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

A rare lamb with eight legs, three ears, two tails, and two tongues was born in Uddri Vaddigere village near Soraba, Karnataka. The newborn survived only for a few hours, drawing huge public attention.

ಸೊರಬ, ಆ.6: ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ಅಪರೂಪದ ದೈಹಿಕ ವೈಶಿಷ್ಟ್ಯಗಳನ್ನು ಹೊಂದಿದ್ದ ಕುರಿಮರಿಯೊಂದು ಜನಿಸಿ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ ಘಟನೆ ಗ್ರಾಮಸ್ಥರಲ್ಲಿ ತೀವ್ರ ಅಚ್ಚರಿ ಹಾಗೂ ಕುತೂಹಲ ಮೂಡಿಸಿದೆ.

ಉದ್ರಿ ವಡ್ಡಿಗೆರೆ ಗ್ರಾಮದ ನಿವಾಸಿಗಳಾದ ಕಾಳಿಂಗಪ್ಪ ಭಾವಿಕಟೇರ್ ಹಾಗೂ ಪುಟ್ಟಮ್ಮ ದಂಪತಿ ಕೃಷಿಯ ಜೊತೆಗೆ ಕುರಿ ಸಾಕಾಣಿಕೆ ನಡೆಸುತ್ತಿದ್ದಾರೆ. ಅವರ ಸಾಕಾಣಿಕೆಯಲ್ಲಿದ್ದ ಕುರಿಯೊಂದು ಬುಧವಾರ ಹೆರಿಗೆ ನೋವು ಕಾಣಿಸಿಕೊಂಡಾಗ ಆರಂಭದಲ್ಲಿ ಅವಳಿ ಮರಿಗಳು ಜನಿಸಬಹುದೆಂದು ಕುಟುಂಬದವರು ಭಾವಿಸಿದ್ದರು. ಆದರೆ ಹೆರಿಗೆ ಪೂರ್ಣಗೊಂಡ ಬಳಿಕ ಒಂದೇ ದೇಹದಲ್ಲಿ ಅಪರೂಪದ ದೈಹಿಕ ವೈಶಿಷ್ಟ್ಯಗಳನ್ನು ಹೊಂದಿದ ಕುರಿಮರಿ ಜನಿಸಿರುವುದು ಕಂಡುಬಂದಿದೆ.

ಜನಿಸಿದ ಕುರಿಮರಿಗೆ ಎಂಟು ಕಾಲುಗಳು, ಮೂರು ಕಿವಿಗಳು, ಎರಡು ಬಾಲಗಳು ಹಾಗೂ ಎರಡು ನಾಲಿಗೆಗಳು ಇದ್ದು, ದೇಹದ ರಚನೆಯೂ ಸಾಮಾನ್ಯ ಕುರಿಮರಿಗಳಿಗಿಂತ ಸಂಪೂರ್ಣ ಭಿನ್ನವಾಗಿತ್ತು. ಈ ಅಪರೂಪದ ದೃಶ್ಯ ಕಂಡ ಗ್ರಾಮಸ್ಥರು ಆಶ್ಚರ್ಯಚಕಿತರಾಗಿದ್ದು, ಸುದ್ದಿ ಹರಡುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಗಳಿಂದಲೂ ಜನರು ಆಗಮಿಸಿ ಕುರಿಮರಿಯನ್ನು ವೀಕ್ಷಿಸಿದರು. ಹಲವರು ಮೊಬೈಲ್‌ಗಳಲ್ಲಿ ಫೋಟೋ ಹಾಗೂ ವಿಡಿಯೊಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರು.

ವಿಚಿತ್ರ ದೈಹಿಕ ರಚನೆಯೊಂದಿಗೆ ಜನಿಸಿದ್ದ ಈ ಕುರಿಮರಿ ಕೆಲವೇ ಗಂಟೆಗಳ ಕಾಲ ಜೀವಂತವಾಗಿದ್ದು, ಬಳಿಕ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಪಶುವೈದ್ಯರ ಪ್ರಕಾರ, ಇಂತಹ ಅಪರೂಪದ ಜನನಗಳು ಭ್ರೂಣದ ಬೆಳವಣಿಗೆಯ ಹಂತದಲ್ಲಿ ಉಂಟಾಗುವ ಜನ್ಮಜಾತ ದೈಹಿಕ ವೈಪರೀತ್ಯಗಳು ಅಥವಾ ಬೆಳವಣಿಗೆಯ ಅಸಹಜತೆಯಿಂದ ಸಂಭವಿಸಬಹುದು. ಇಂತಹ ಮರಿಗಳು ಸಾಮಾನ್ಯವಾಗಿ ಹೆಚ್ಚು ಕಾಲ ಬದುಕುವುದು ಅಪರೂಪ ಎಂದು ಅವರು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

20 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

20 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

20 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

1 day ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

1 day ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

1 day ago