ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

Ripponpete: Akhila Karnataka Building Workers Organization district president Sunder Babu said allegations against the organization are baseless and denied claims of excess charges for labour cards.

ರಿಪ್ಪನ್‌ಪೇಟೆ: ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ಯಾವುದೇ ಅಡೆತಡೆಯಿಲ್ಲದೆ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಏಕೈಕ ಗುರಿ ಹೊಂದಿರುವ ನಮ್ಮ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆಯ ವಿರುದ್ಧ ಇತ್ತೀಚೆಗೆ ಕೇಳಿಬಂದಿರುವ ಎಲ್ಲಾ ಆರೋಪಗಳು ಸಂಪೂರ್ಣವಾಗಿ ನಿರಾಧಾರ ಹಾಗೂ ಸತ್ಯಕ್ಕೆ ದೂರವಾದವು ಎಂದು ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಸುಂದರ್ ಬಾಬು ಅವರು ಸ್ಪಷ್ಟಪಡಿಸಿದ್ದಾರೆ.

​ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘಟನೆಯ ಪಾರದರ್ಶಕ ಕಾರ್ಯವೈಖರಿಯ ಕುರಿತು ಸಮಗ್ರ ಮಾಹಿತಿ ನೀಡಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಮ್ಮ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ತಾಲೂಕಿನಾದ್ಯಂತ ಹಲವಾರು ಮಹತ್ವದ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿದೆ. ಕಾರ್ಮಿಕರ ಸರ್ವಾಂಗೀಣ ಏಳಿಗೆಗಾಗಿ ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ.

ಕಟ್ಟಡ ಕಾರ್ಮಿಕರು ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ಭವ್ಯ ಕಟ್ಟಡಗಳು ತಲೆ ಎತ್ತುತ್ತವೆ. ಆದರೆ, ಅವರ ಬದುಕು ಹಸನಾಗಲು ಸರ್ಕಾರದ ಸೌಲಭ್ಯಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ನಮ್ಮ ಸಂಘಟನೆ ಹಗಲಿರುಳು ಶ್ರಮಿಸುತ್ತಿದೆ. ಆದರೆ, ಕಾರ್ಮಿಕರೆಂದು ಹೇಳಿಕೊಳ್ಳುವ ಕೆಲವರು ಉದ್ದೇಶಪೂರ್ವಕವಾಗಿ ಸಂಘಟನೆಯ ಹೆಸರಿಗೆ ಮಸಿ ಬಳಿಯುವ ಯತ್ನ ಮಾಡುತ್ತಿದ್ದಾರೆ. ಕಾರ್ಮಿಕರ ಗುರುತಿನ ಚೀಟಿ (ಲೇಬರ್ ಕಾರ್ಡ್) ಮಾಡಿಕೊಡಲು ನಮ್ಮ ಪದಾಧಿಕಾರಿಗಳು ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು,” ಎಂದು ಸುಂದರ್ ಬಾಬು ಆಕ್ರೋಶ ವ್ಯಕ್ತಪಡಿಸಿದರು.

​ಸಂಘದ ಜಿಲ್ಲಾಧ್ಯಕ್ಷರಾದ ಸಂಜಯ್ ಮಾತನಾಡಿ, “ಲೇಬರ್ ಕಾರ್ಡ್‌ಗೆ ಹೆಚ್ಚುವರಿ ಹಣ ಪಡೆದಿರುವ ಆರೋಪದ ಕುರಿತು ನಾವು ಈಗಾಗಲೇ ಎಲ್ಲಾ ಆಯಾಮಗಳಲ್ಲಿ ಆಂತರಿಕ ತನಿಖೆ ನಡೆಸಿದ್ದೇವೆ. ಈ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂಬುದು ದೃಢಪಟ್ಟಿದೆ.

ಆರೋಪ ಮಾಡುವವರ ಬಳಿ ಯಾವುದೇ ನಿಖರ ಸಾಕ್ಷ್ಯಾಧಾರಗಳಿದ್ದರೆ ಅವರು ಧಾರಾಳವಾಗಿ ಕಾನೂನು ಕ್ರಮ ಕೈಗೊಳ್ಳಬಹುದು, ನಾವು ಯಾವುದೇ ತನಿಖೆಗೂ ಸಿದ್ಧ. ಅದನ್ನು ಬಿಟ್ಟು ಕೇವಲ ಮಾಧ್ಯಮಗಳ ಮುಂದೆ ಬಂದು ಸಂಘಟನೆಯ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ, ಸಂಘಟನೆಯು ಅದನ್ನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ಸಂಘಟನೆಯೇ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದೆ.

​ಹೊಸನಗರ ತಾಲೂಕು ಗ್ರಾಮಾಂತರ ಅಧ್ಯಕ್ಷರಾದ ಮಹಮ್ಮದ್ ಹುಸೇನ್ ಅವರು ಆರೋಪಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ನನ್ನ ಹಾಗೂ ಇತರ ಕೆಲ ಪದಾಧಿಕಾರಿಗಳ ಮೇಲೆ ಸುಖಾಸುಮ್ಮನೆ ಗೂಬೆ ಕೂರಿಸುವ ಯತ್ನ ನಡೆಯುತ್ತಿದೆ. ಕಳೆದ ಮೂರು ವರ್ಷಗಳಿಂದ ಕಾರ್ಡ್ ನೀಡಿಲ್ಲ ಹಾಗೂ ಹಣ ಪಡೆಯಲಾಗಿದೆ ಎಂಬುದು ಸತ್ಯವೇ ಆಗಿದ್ದರೆ, ಈ ವಿಚಾರವನ್ನು ಅವರು ಇಲ್ಲಿಯವರೆಗೂ ನಡೆದ ಸಂಘದ ಯಾವುದೇ ಸಭೆಗಳಲ್ಲಿ ಏಕೆ ಪ್ರಸ್ತಾಪಿಸಿಲ್ಲ?” ಎಂದು ಪ್ರಶ್ನಿಸಿದರು.

ನಮ್ಮ ಸಂಘಟನೆಯು ಕಾರ್ಮಿಕರ ಸಹಕಾರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಮ್ಮ ಈ ಬೆಳವಣಿಗೆಯನ್ನು ಸಹಿಸಲಾಗದವರು ಮಾಡುತ್ತಿರುವ ತೇಜೋವಧೆಯ ಹುನ್ನಾರವಿದು. ಇಂತಹ ಕೀಳು ಮಟ್ಟದ ಆರೋಪಗಳನ್ನು ಮಾಡುವವರು ಒಮ್ಮೆ ತಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು.

ಇದೇ ಸಂದರ್ಭದಲ್ಲಿ, ಶಸ್ತ್ರಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವ ಉಂಟಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಕೋಡೂರು ಶಾಖವಳ್ಳಿ ಗ್ರಾಮದ ಸುಮಾ ಅವರ ಕುಟುಂಬಕ್ಕೆ ಕಾರ್ಮಿಕರ ಸಂಘದ ವತಿಯಿಂದ ಧನಸಹಾಯ ನೀಡಲಾಯಿತು. ರಿಪ್ಪನ್‌ಪೇಟೆ ಠಾಣೆಯ ಪಿಎಸ್ಐ ರಾಜುರೆಡ್ಡಿ ಅವರು ಧನಸಹಾಯವನ್ನು ಸುಮಾ ಅವರ ಪತಿಗೆ ವಿತರಿಸಿದರು.

​ಈ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಮಿಕ ಸದಸ್ಯರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

20 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

20 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

21 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago