ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

Workers in Ripponpete allege money was collected for labour cards and renewals, but cards were not issued for years. They demand an inquiry and justice.

ರಿಪ್ಪನ್‌ಪೇಟೆ: ಕಾರ್ಮಿಕರ ಕಾರ್ಡ್ ಮಾಡಿಸಿಕೊಡುವುದಾಗಿ ಹಾಗೂ ನವೀಕರಣ ಮಾಡಿಕೊಡುವುದಾಗಿ ನಂಬಿಸಿ ಹಣ ಪಡೆದು, ವರ್ಷಗಳೇ ಕಳೆದರೂ ಕಾರ್ಡ್ ನೀಡದೆ ಸತಾಯಿಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳ ವಿರುದ್ಧ ಕೆಲ ಕಾರ್ಮಿಕರು ಆರೋಪಿಸಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಮಿಕರು, ಕಾರ್ಡ್‌ಗಾಗಿ ಹಣ ಪಾವತಿಸಿದ ಬಳಿಕವೂ ಯಾವುದೇ ಸ್ಪಷ್ಟ ಮಾಹಿತಿ ನೀಡದೆ ವಿಳಂಬ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೊಸನಗರ ತಾಲೂಕು ಅಧ್ಯಕ್ಷ ಮೊಹಮ್ಮದ್ ಹುಸೇನ್, ಉಪಾಧ್ಯಕ್ಷ ಶಂಕರಾಚಾರ್ಯ ಹಾಗೂ ಕಾರ್ಯದರ್ಶಿ ರಾಘವೇಂದ್ರ ಅವರನ್ನು ಹಲವು ಬಾರಿ ಸಂಪರ್ಕಿಸಲು ಪ್ರಯತ್ನಿಸಿದರೂ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕರೆಗಳನ್ನೂ ಸ್ವೀಕರಿಸುತ್ತಿಲ್ಲ ಎಂದು ಕಾರ್ಮಿಕರು ದೂರಿದರು.

₹500 ನೀಡಿ ಎರಡು ವರ್ಷ ಕಳೆದರೂ ನವೀಕರಣವಿಲ್ಲ

ಬಟ್ಟೇಮಲ್ಲಪ್ಪದ ಕಾರ್ಮಿಕ ಮಹೇಶ್ ಅವರ ಪ್ರಕಾರ, ಕಾರ್ಮಿಕ ಕಾರ್ಡ್ ನವೀಕರಣಕ್ಕಾಗಿ ₹500 ಪಾವತಿಸಿ ಎರಡು ವರ್ಷ ಕಳೆದಿದ್ದರೂ ಈವರೆಗೂ ನವೀಕರಣ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿದರು.

₹1,700 ಪಾವತಿಸಿದರೂ ಕಾರ್ಡ್ ಕೈಸೇರಿಲ್ಲ

ಮತ್ತೋರ್ವ ಕಾರ್ಮಿಕ ಜನಾರ್ದನ್ ಅವರು, ಕಾರ್ಡ್ ಮಾಡಿಸಿಕೊಳ್ಳಲು ಮೊದಲಿಗೆ ₹1,000, ನಂತರ ₹250 ಹಾಗೂ ಮತ್ತೊಮ್ಮೆ ₹500 ಸೇರಿ ಒಟ್ಟು ₹1,700 ಪಾವತಿಸಿದ್ದರೂ ಮೂರು-ನಾಲ್ಕು ವರ್ಷ ಕಳೆದರೂ ಕಾರ್ಡ್ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೆಚ್ಚುವರಿ ₹1,000 ಬೇಡಿಕೆ ಆರೋಪ

ಕಾರ್ಡ್ ಮಾಡಿಸಿಕೊಡಲು ತಾಲೂಕು ಅಧ್ಯಕ್ಷ ಮೊಹಮ್ಮದ್ ಹುಸೇನ್ ಅವರು ಹೆಚ್ಚುವರಿಯಾಗಿ ₹1,000 ನೀಡುವಂತೆ ಕೇಳಿದ್ದಾರೆ ಎಂದು ಚಿದಾನಂದ್ ಎಂಬ ಕಾರ್ಮಿಕರು ಆರೋಪಿಸಿದರು.

ಬಡ ಕಾರ್ಮಿಕರಿಂದ ಹಣ ಪಡೆದು ಕಾರ್ಡ್ ನೀಡದೆ ವಿಳಂಬ ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ನ್ಯಾಯ ಒದಗಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಕಾರ್ಮಿಕರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರವೀಣ್ ಆಚಾರ್ ರಿಪ್ಪನ್‌ಪೇಟೆ, ಸುದೇಶ್ ರಿಪ್ಪನ್‌ಪೇಟೆ, ಜನಾರ್ದನ್ ಬಟ್ಟೇಮಲ್ಲಪ್ಪ, ಹರತಳು ಮಹೇಶ್, ಬಟ್ಟೇಮಲ್ಲಪ್ಪದ ಸತ್ಯನಾರಾಯಣ ಆಚಾರ್ ಸೇರಿದಂತೆ ಹಲವು ಕಾರ್ಮಿಕರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

11 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

11 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

15 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

17 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

18 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago