ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ
A woman travelling from Shivamogga to Kargal lost gold jewellery worth ₹17.55 lakh and ₹45,000 cash after falling asleep on a bus. Anandanapura Police have registered a theft case and launched an investigation.
ಸಾಗರ, ಆ.5: ಶಿವಮೊಗ್ಗದಿಂದ ಕಾರ್ಗಲ್ಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ₹17.55 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹45,000 ನಗದು ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಟಿಪ್ಪುನಗರ ನಿವಾಸಿ ರಮ್ಲಾ ಅವರು ಜುಲೈ 11ರಂದು ತಮ್ಮ ಸೊಸೆ ಹಸೀನಾ ಅವರೊಂದಿಗೆ ಕಾರ್ಗಲ್ನಲ್ಲಿ ನಡೆಯಲಿದ್ದ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ತಮ್ಮೊಂದಿಗೆ ತಂದಿದ್ದ ವ್ಯಾನಿಟಿ ಬ್ಯಾಗ್ನೊಳಗಿನ ಪರ್ಸ್ನಲ್ಲಿ 171 ಗ್ರಾಂ ತೂಕದ ಚಿನ್ನಾಭರಣ ಹಾಗೂ ₹45,000 ನಗದು ಇಟ್ಟಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಪ್ರಕಾರ, ಬಸ್ ಆಲ್ಕೊಳ ಬಳಿ ಬಂದಾಗ ಮಹಿಳೆಯೊಬ್ಬರು ಬಸ್ಗೆ ಏರಿ ರಮ್ಲಾ ಅವರ ಪಕ್ಕದ ಆಸನದಲ್ಲಿ ಕುಳಿತಿದ್ದರು. ಬಳಿಕ ಆಯನೂರು ದಾಟಿದ ನಂತರ ರಮ್ಲಾ ಅವರು ಗಾಢ ನಿದ್ರೆಗೆ ಜಾರಿದ್ದಾರೆ. ಬಸ್ ಯಡೇಹಳ್ಳಿ ಸಮೀಪ ತಲುಪಿದಾಗ ಎಚ್ಚರಗೊಂಡು ನೋಡಿದ ವೇಳೆ ವ್ಯಾನಿಟಿ ಬ್ಯಾಗ್ನ ಜಿಪ್ ತೆರೆದಿರುವುದು ಕಂಡುಬಂದಿದೆ.
ತಕ್ಷಣ ಬ್ಯಾಗ್ ಪರಿಶೀಲಿಸಿದಾಗ ಚಿನ್ನಾಭರಣ ಮತ್ತು ನಗದು ಇದ್ದ ಪರ್ಸ್ ಕಾಣೆಯಾಗಿರುವುದು ಗೊತ್ತಾಗಿದೆ. ಇದೇ ವೇಳೆ ತಮ್ಮ ಪಕ್ಕದಲ್ಲಿ ಕುಳಿತಿದ್ದ ಮಹಿಳೆ ಆನಂದಪುರದಲ್ಲಿ ಬಸ್ನಿಂದ ಇಳಿದಿರುವುದು ತಿಳಿದುಬಂದಿದ್ದು, ಆಕೆಯ ಮೇಲೆಯೇ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿದೆ.
ಕಳ್ಳತನವಾದ ವಸ್ತುಗಳಲ್ಲಿ ₹5 ಲಕ್ಷ ಮೌಲ್ಯದ ಎರಡು ಎಳೆಯ ಮಾಂಗಲ್ಯ ಸರ, ₹5 ಲಕ್ಷ ಮೌಲ್ಯದ ಲಾಂಗ್ ಚೈನ್, ₹4 ಲಕ್ಷ ಮೌಲ್ಯದ ಎರಡು ಬಳೆಗಳು, ₹1.40 ಲಕ್ಷ ಮೌಲ್ಯದ ಜುಮುಕಿ-ಬೆಂಡೋಲೆ, ₹80 ಸಾವಿರ ಮೌಲ್ಯದ ಬ್ರೇಸ್ಲೆಟ್, ₹60 ಸಾವಿರ ಮೌಲ್ಯದ ಮೂರು ಉಂಗುರಗಳು, ₹30 ಸಾವಿರ ಮೌಲ್ಯದ ಓಲೆಗಳು ಹಾಗೂ ₹45 ಸಾವಿರ ನಗದು ಸೇರಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕುಟುಂಬ ಸದಸ್ಯರೊಂದಿಗೆ ಚರ್ಚಿಸಿದ ಬಳಿಕ ತಡವಾಗಿ ದೂರು ನೀಡಲಾಗಿದೆ ಎಂದು ತಿಳಿಸಲಾಗಿದ್ದು, ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…
ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…
ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…