ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ
Sagara Rural Police arrested four accused in a borewell cable theft case at Bhimaneri village and seized stolen cables, cutting pliers and a Maruti Omni car.
ಸಾಗರ: ತೋಟಗಳಲ್ಲಿನ ಬೋರ್ವೆಲ್ಗಳ ಕೇಬಲ್ ಕದಿಯುತ್ತಿದ್ದ ಆರೋಪದ ಮೇರೆಗೆ ನಾಲ್ವರನ್ನು ಸಾಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸಾಗರ ತಾಲೂಕಿನ ಭೀಮನೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಆಗಸ್ಟ್ 16ರಂದು ಭೀಮನೇರಿ ಗ್ರಾಮದ ಕೃಷ್ಣಪ್ಪ ಎಂಬುವವರ ತೋಟದಲ್ಲಿದ್ದ ಬೋರ್ವೆಲ್ ಮೋಟಾರ್ ಆನ್ ಆಗದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಕೇಬಲ್ ಕಟ್ ಆಗಿರುವುದು ಪತ್ತೆಯಾಗಿತ್ತು. ಇದೇ ವೇಳೆ ಪಕ್ಕದ ತೋಟದಲ್ಲಿ ಕೇಬಲ್ ಕಳ್ಳತನ ಮಾಡುತ್ತಿದ್ದವರನ್ನು ಗ್ರಾಮಸ್ಥರು ಗಮನಿಸಿ ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಘಟನಾ ಸ್ಥಳದಲ್ಲಿ KA-11-M-1288 ನೋಂದಣಿ ಸಂಖ್ಯೆಯ ಮಾರುತಿ ಓಮ್ನಿ ಕಾರು ಪತ್ತೆಯಾಗಿದ್ದು, ಅದರ ಚಾಲಕ ನೇಹಾಲ್ನನ್ನು ಗ್ರಾಮಸ್ಥರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ನೇಹಾಲ್ನನ್ನು ವಿಚಾರಣೆ ನಡೆಸಿದಾಗ ಬೋರ್ವೆಲ್ ಕೇಬಲ್ ಕಳ್ಳತನದ ಜಾಲದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ ಸುಮಾರು ₹25,000 ಮೌಲ್ಯದ ಬೋರ್ವೆಲ್ ಕೇಬಲ್, ಕಟಿಂಗ್ ಪ್ಲೈಯರ್ ಹಾಗೂ ಕಳ್ಳತನಕ್ಕೆ ಬಳಸಿದ್ದ ಮಾರುತಿ ಓಮ್ನಿ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮೊಹಮ್ಮದ್ ಸದಾಕತ್ ಉಲ್ಲಾ, ನೇಹಾಲ್ ಸೇರಿದಂತೆ ನಾಲ್ವರ ವಿರುದ್ಧ BNS ಕಲಂ 303(2) ಅಡಿಯಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026 ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…