Scorpio car overturns near Ganapathi Kere in Sagara after losing control at a turn. The vehicle fell into a channel between an electrical transformer and the lake retaining wall.
ಸಾಗರ: ನಗರದ ಗಣಪತಿ ಕೆರೆಯ ಅಗ್ರಹಾರಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಸ್ಕಾರ್ಪಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಗಣಪತಿ ಕೆರೆಯ ದಂಡೆಯ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ಸ್ಕಾರ್ಪಿಯೋ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಟಿ.ಸಿ. (ಟ್ರಾನ್ಸ್ಫಾರ್ಮರ್) ಹಾಗೂ ಕೆರೆಯ ತಡೆಗೋಡೆಯ ನಡುವಿನ ಚಾನಲ್ಗೆ ಉರುಳಿದೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಕಾರು ಪಲ್ಟಿಯಾಗಿ ಬಿದ್ದಿದ್ದು, ವಿದ್ಯುತ್ ಟಿ.ಸಿ. ಮತ್ತು ಕೆರೆಯ ತಡೆಗೋಡೆಯ ನಡುವಿನ ಪ್ರದೇಶದಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ.
ಘಟನೆ ನಡೆದ ಸ್ಥಳ ಹಾಗೂ ಕಾರು ಪಲ್ಟಿಯಾದ ರೀತಿ ಗಮನಿಸಿದರೆ, ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದ್ದು, ಅದೃಷ್ಟವಶಾತ್ ಭಾರೀ ಅಪಾಯ ತಪ್ಪಿದಂತಾಗಿದೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಕಾರಿನಲ್ಲಿದ್ದವರ ಸ್ಥಿತಿಗತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್