ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

Controversy erupts over Anganwadi helper appointment in Mugudthi village of Shivamogga district as some villagers reportedly hesitate to send children. Officials visit and hold a meeting.

ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ನೇಮಕಾತಿಗೆ ಸಂಬಂಧಿಸಿದಂತೆ ವಿವಾದ ಉಂಟಾಗಿದೆ.

ಅರ್ಹತೆ ಆಧಾರದ ಮೇಲೆ ಕೆಳ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಲಾಗಿದ್ದು, ಇದನ್ನು ವಿರೋಧಿಸಿ ಕೆಲ ಗ್ರಾಮಸ್ಥರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಮಾಹಿತಿ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಜಿಲ್ಲಾಧಿಕಾರಿಗಳಿಗೆ ಮಾಹಿತಿ – ಸ್ಥಳಕ್ಕೆ ಅಧಿಕಾರಿಗಳ ದೌಡು

ಮಕ್ಕಳನ್ನು ಅಂಗನವಾಡಿಗೆ ಕಳುಹಿಸದಿರುವ ಕುರಿತು ಗ್ರಾಮಸ್ಥರೊಬ್ಬರು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ (CDPO) ಗಾಯತ್ರಿ ರಾಮಚಂದ್ರ ಹಾಗೂ ರಿಪ್ಪನಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಮೂಗುಡ್ತಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು.

ನಿಯಮದ ಪ್ರಕಾರವೇ ನೇಮಕಾತಿ ನಡೆದಿದೆ – ಸಿಡಿಪಿಓ

ಸಭೆಯಲ್ಲಿ ಮಾತನಾಡಿದ ಸಿಡಿಪಿಓ ಗಾಯತ್ರಿ ರಾಮಚಂದ್ರ ರವರು ಸರ್ಕಾರದ ನಿಯಮಾವಳಿ ಹಾಗೂ ಅರ್ಹತೆ ಆಧಾರದ ಮೇಲೆಯೇ ಅಂಗನವಾಡಿ ಸಹಾಯಕಿ ನೇಮಕಾತಿ ನಡೆದಿದ್ದು, ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು.

“ನೇಮಕಾತಿ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿದೆ. ಸಮಸ್ಯೆ ಇದ್ದರೆ ಸ್ಪಷ್ಟವಾಗಿ ತಿಳಿಸಬೇಕು. ಮಕ್ಕಳಿಗೆ ಅಂಗನವಾಡಿ ಸೌಲಭ್ಯದಿಂದ ವಂಚನೆ ಆಗಬಾರದು” ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ಸೂಚನೆ ನೀಡಿದರು.

ಗ್ರಾಮದಲ್ಲಿ ಯಾವುದೇ ಜಾತಿ ಭಿನ್ನಾಭಿಪ್ರಾಯ ಇಲ್ಲ ಎಂದ ಗ್ರಾಮಸ್ಥರು

ಅಧಿಕಾರಿಗಳೊಂದಿಗೆ ನಡೆದ ಚರ್ಚೆಯಲ್ಲಿ ಗ್ರಾಮಸ್ಥರು, “ನಮ್ಮ ಗ್ರಾಮದಲ್ಲಿ ಜಾತಿ ಆಧಾರಿತ ಯಾವುದೇ ಸಮಸ್ಯೆ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಯಾವುದೇ ಗೊಂದಲವಿಲ್ಲ” ಎಂದು ತಿಳಿಸಿದರು.

ಮೂಗೂಡ್ತಿ ಗ್ರಾಮದ ಬಲಮುರಿ ಗಣಪತಿ ದೇವಸ್ಥಾನದ ಅಧ್ಯಕ್ಷ ಗುರುರಾಜ್ ಮಾತನಾಡಿ “ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಅಂಗನವಾಡಿ ಸಹಾಯಕಿ ನೇಮಕಾತಿ ವಿಚಾರದಲ್ಲಿ ಗ್ರಾಮದಲ್ಲಿ ಯಾವುದೇ ರೀತಿಯ ಜಾತಿ ಭೇದಭಾವ ಅಥವಾ ವಿರೋಧದ ವಾತಾವರಣವಿಲ್ಲ. ಎಲ್ಲ ಸಮುದಾಯದವರೂ ಪರಸ್ಪರ ಸಹಕಾರದಿಂದ ಹಾಗೂ ಸೌಹಾರ್ದಯುತವಾಗಿ ಜೀವನ ನಡೆಸುತ್ತಿದ್ದೇವೆ. ಈ ವಿಚಾರದಲ್ಲಿ ಕೆಲವರಿಗೆ ತಪ್ಪು ಮಾಹಿತಿ ಅಥವಾ ಅನುಮಾನ ಉಂಟಾಗಿರಬಹುದು. ಆದರೆ ಗ್ರಾಮದಲ್ಲಿ ಅಂತಹ ಯಾವುದೇ ಸಮಸ್ಯೆ ಇಲ್ಲ. ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು. ಅಧಿಕಾರಿಗಳು ನಡೆಸಿದ ಸಭೆಯಲ್ಲಿಯೂ ಗ್ರಾಮದ ವಾಸ್ತವ ಪರಿಸ್ಥಿತಿಯನ್ನು ಸ್ಪಷ್ಟಪಡಿಸಲಾಗಿದೆ” ಎಂದು ಹೇಳಿದರು.

ಸದ್ಯ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಗ್ರಾಮದಲ್ಲಿ ಪರಿಸ್ಥಿತಿ ತಿಳಿಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

14 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

15 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

15 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

16 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

2 days ago