ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು
Shivamogga court sentences a man to 5 years rigorous imprisonment and ₹17,000 fine for creating fake government documents, stamps and official seals to commit fraud.
ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆಗಳು, ಸ್ಟ್ಯಾಂಪ್ಗಳು ಹಾಗೂ ವಿವಿಧ ಕಚೇರಿಗಳ ಮೊಹರುಗಳನ್ನು ಸೃಷ್ಟಿಸಿ ಬ್ಯಾಂಕ್ ಮತ್ತು ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಆರೋಪಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17,000 ದಂಡ ವಿಧಿಸಿ ತೀರ್ಪು ನೀಡಿದೆ.
ನಗರದ ಎ.ಎನ್.ಕೆ. ರಸ್ತೆಯಲ್ಲಿರುವ ‘ಇಮೇಜ್ ಟೆಕ್ನಾಲಜೀಸ್’ ಕಂಪ್ಯೂಟರ್ ಅಂಗಡಿಯ ವಿಷ್ಣುಭಕ್ತ ಶಿಕ್ಷೆಗೆ ಗುರಿಯಾದ ಆರೋಪಿ.
ಆರೋಪಿ ಮೋಸದ ಉದ್ದೇಶದಿಂದ ನಕಲಿ ದಾಖಲೆಗಳು, ಸ್ಟ್ಯಾಂಪ್ಗಳು ಹಾಗೂ ವಿವಿಧ ಕಚೇರಿಗಳ ಮೊಹರುಗಳನ್ನು ಸೃಷ್ಟಿಸಿ, ಅವುಗಳನ್ನು ಬ್ಯಾಂಕ್ ಮತ್ತು ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಆರೋಪ ಎದುರಿಸುತ್ತಿದ್ದ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಡಿವೈಎಸ್ಪಿ ಪ್ರಶಾಂತ್ ಮುನ್ನೊಳಿ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ಆರೋಪ ಸಾಬೀತಾಗಿದೆ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಮಮತಾ ಬಿ.ಎಸ್. ವಾದ ಮಂಡಿಸಿದ್ದರು.
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…
ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್ಪೇಟೆಯಲ್ಲಿ ಎಎಸ್ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…