ಮಲೆನಾಡಿನಲ್ಲಿ ಮಳೆಯ ಅಬ್ಬರ: ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಭಾರೀ ಒಳಹರಿವು – ನದಿ ತೀರದ ಜನರಿಗೆ ಎಚ್ಚರಿಕೆ
Heavy rainfall in Karnataka’s Malnad region has significantly increased inflow into the Tunga, Bhadra, and Linganamakki reservoirs in Shivamogga district. Authorities have warned people living along riverbanks to remain alert.
ಶಿವಮೊಗ್ಗ, ಆ.2: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಜಿಲ್ಲೆಯ ಪ್ರಮುಖ ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳಲ್ಲಿ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಿದೆ. ಮಳೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತುಂಗಾ ಜಲಾಶಯಕ್ಕೆ 84 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು
ಇಂದು ಬೆಳಿಗ್ಗೆ ಲಭ್ಯವಾದ ಮಾಹಿತಿಯಂತೆ, ತುಂಗಾ ಜಲಾಶಯದ ಗರಿಷ್ಠ ನೀರಿನ ಮಟ್ಟ (FRL) 588.24 ಮೀಟರ್ ಆಗಿದ್ದು, ಪ್ರಸ್ತುತ 587.36 ಮೀಟರ್ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಒಟ್ಟು 2.755 ಟಿಎಂಸಿ ನೀರು ಇದ್ದು, ಜೀವಂತ ಸಂಗ್ರಹ 1.926 ಟಿಎಂಸಿ ಆಗಿದೆ.
ಜಲಾಶಯಕ್ಕೆ ಒಟ್ಟು 84,223 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅದರಲ್ಲಿ 82,503 ಕ್ಯೂಸೆಕ್ ನದಿಯಿಂದಲೇ ಒಳಹರಿವು ದಾಖಲಾಗಿದೆ. ಜಲಾಶಯದಿಂದ 72,460 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 588.17 ಮೀಟರ್ ಇದ್ದು, ಒಳಹರಿವು 17,401 ಕ್ಯೂಸೆಕ್ ಹಾಗೂ ಹೊರಹರಿವು 15,215 ಕ್ಯೂಸೆಕ್ ಆಗಿತ್ತು.
ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 2,158 ಅಡಿ ಆಗಿದ್ದು, ಇಂದು ಬೆಳಿಗ್ಗೆ 6 ಗಂಟೆಗೆ ನೀರಿನ ಮಟ್ಟ 2,132.25 ಅಡಿ ದಾಖಲಾಗಿದೆ. ಜಲಾಶಯದಲ್ಲಿ 43.147 ಟಿಎಂಸಿ ನೀರು ಸಂಗ್ರಹವಾಗಿದೆ.
ಜಲಾಶಯಕ್ಕೆ 31,874 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೇವಲ 185 ಕ್ಯೂಸೆಕ್ ನೀರನ್ನು ಮಾತ್ರ ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 180 ಅಡಿ 5 ಇಂಚು ಇದ್ದು, 64.692 ಟಿಎಂಸಿ ನೀರು ಸಂಗ್ರಹವಾಗಿತ್ತು.
ಲಿಂಗನಮಕ್ಕಿ ಜಲಾಶಯದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ನೀರಿನ ಮಟ್ಟ 1,781.85 ಅಡಿ ದಾಖಲಾಗಿದೆ. ಜಲಾಶಯಕ್ಕೆ 77,580 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಪ್ರಸ್ತುತ 2,066 ಕ್ಯೂಸೆಕ್ ನೀರನ್ನು ಮಾತ್ರ ಸ್ಲೂಯಿಸ್ ಮೂಲಕ ಹೊರಬಿಡಲಾಗುತ್ತಿದೆ.
ಜಲಾಶಯದಲ್ಲಿ 57.81 ಟಿಎಂಸಿ ಜೀವಂತ ನೀರಿನ ಸಂಗ್ರಹವಿದ್ದು, ಇದು ಒಟ್ಟು ಸಾಮರ್ಥ್ಯದ 38.13 ಶೇಕಡಾ ಆಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 127.25 ಟಿಎಂಸಿ (83.92%) ಜೀವಂತ ನೀರು ಸಂಗ್ರಹವಾಗಿತ್ತು.
ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಲಾಶಯಗಳಿಗೆ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…