ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ
A 24-year-old married woman died by suicide in Shivamogga. Based on her family’s complaint alleging mental harassment, police have registered a case against her husband and launched a search to arrest him.
ಶಿವಮೊಗ್ಗ, ಆ.1: ನಗರದ ಶರಾವತಿ ನಗರದಲ್ಲಿ 24 ವರ್ಷದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಮೃತೆಯ ಕುಟುಂಬದ ದೂರಿನ ಮೇರೆಗೆ ಪತಿ ವಿರುದ್ಧ ಮಾನಸಿಕ ಕಿರುಕುಳ ಆರೋಪದಡಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಮೃತೆಯನ್ನು ನಂದಿನಿ (24) ಎಂದು ಗುರುತಿಸಲಾಗಿದೆ. ಅವರು ಮೂಲತಃ ಶಿವಮೊಗ್ಗದ ಶರಾವತಿ ನಗರದ ನಿವಾಸಿಯಾಗಿದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಶಿಕಾರಿಪುರ ಮೂಲದ ಸ್ಟೀವನ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು.
ಮದುವೆಯ ನಂತರ ದಂಪತಿ ನಾಲ್ಕು ವರ್ಷ ಶಿಕಾರಿಪುರದಲ್ಲಿ ವಾಸವಿದ್ದು, ಬಳಿಕ ಉದ್ಯೋಗದ ನಿಮಿತ್ತ ಶಿವಮೊಗ್ಗಕ್ಕೆ ಬಂದು ನೆಲೆಸಿದ್ದರು.
ಸ್ಟೀವನ್ ನಗರದ ಎನ್.ಟಿ. ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದರೆ, ನಂದಿನಿ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತೆಯ ಕುಟುಂಬದ ಆರೋಪದ ಪ್ರಕಾರ, ಮದುವೆಯಾದ ನಂತರದಿಂದಲೇ ಸ್ಟೀವನ್ ಪತ್ನಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. “ಅಡುಗೆ ಸರಿಯಾಗಿ ಮಾಡುವುದಿಲ್ಲ”, “ನೀನು ನನಗೆ ಬೇಡ”, “ನಿನ್ನ ತಂದೆ ಮದುವೆಯಲ್ಲಿ ಏನೂ ಕೊಟ್ಟಿಲ್ಲ” ಎಂಬ ಮಾತುಗಳ ಮೂಲಕ ಅವಮಾನಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿದ್ದು, ಇದೇ ಮಾನಸಿಕ ಕಿರುಕುಳದಿಂದ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತೆಯ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಪತಿ ಸ್ಟೀವನ್ ವಿರುದ್ಧ ಪ್ರಕರಣ ದಾಖಲಿಸಿರುವ ದೊಡ್ಡಪೇಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬಂಧನಕ್ಕಾಗಿ ವಿಶೇಷ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…