ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

Three people were arrested in NR Pura taluk of Shivamogga district for allegedly transporting and selling cannabis. Police seized cannabis worth around ₹50,000 and two bikes.

ಶಿವಮೊಗ್ಗ: ಮಳೆಯಿಂದಾಗಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ವೇಳೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಕಣಬೂರು ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ₹50 ಸಾವಿರ ಮೌಲ್ಯದ ಗಾಂಜಾ, ಎರಡು ಬೈಕ್‌ಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆ.ಕಣಬೂರು ಬಸ್‌ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮೂವರನ್ನು ಪೊಲೀಸರು ತಪಾಸಣೆ ನಡೆಸಿದಾಗ, ಅವರ ಬ್ಯಾಗ್‌ನಲ್ಲಿ ಗಾಂಜಾ ಹೂ, ಮೊಗ್ಗು ಹಾಗೂ ಸೊಪ್ಪು ಪತ್ತೆಯಾಗಿದೆ.
ವಿಚಾರಣೆ ವೇಳೆ ಆರೋಪಿಗಳು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು ಕಡಿಮೆ ಬೆಲೆಗೆ ಗಾಂಜಾ ನೀಡಿದ್ದು, ಅದನ್ನು ತಂದು ಇಲ್ಲಿ ಮಾರಾಟ ಮಾಡುತ್ತಿದ್ದುದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಎರಡು ಬೈಕ್‌ಗಳಲ್ಲಿ ಬಂದಿದ್ದ ಆರೋಪಿಗಳು ಮಳೆಯ ಕಾರಣಕ್ಕೆ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ಗಾಂಜಾ ಹಾಗೂ ಎರಡು ಬೈಕ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಎನ್.ಆರ್.ಪುರ ಪೊಲೀಸ್ ಠಾಣಾಧಿಕಾರಿ ನೂತನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನಾಗರಾಜ್, ಸಿಬ್ಬಂದಿಗಳಾದ ಮಧು, ಕೌಸಿಕ್, ಚಂದ್ರು, ಪರಮೇಶ್ ಹಾಗೂ ಕಾಂತೇಜ್ ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

2 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

2 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

2 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago