ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ
Shivamogga police have registered POCSO and Atrocities Act cases against a PU college principal following a minor student’s complaint alleging harassment and inappropriate conduct.
ಶಿವಮೊಗ್ಗ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಪ್ರತಿಷ್ಠಿತ ಪಿಯು ಕಾಲೇಜೊಂದರ ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ನಗರದ ಕಾಲೇಜೊಂದರ ಪ್ರಾಂಶುಪಾಲ ರವಿಕುಮಾರ್ ಆರೋಪಿಯಾಗಿದ್ದಾರೆ. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ದೂರಿನ ಪ್ರಕಾರ, ಕುಟುಂಬದ ಸಂಬಂಧಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಜುಲೈ 18ರಂದು ಕಾಲೇಜಿಗೆ ತೆರಳಿರಲಿಲ್ಲ. ಜುಲೈ 20ರಂದು ಕೂಡ ಕಾಲೇಜಿಗೆ ಗೈರಾಗಿದ್ದ ಹಿನ್ನೆಲೆಯಲ್ಲಿ ಜುಲೈ 21ರಂದು ಕಾಲೇಜಿಗೆ ತೆರಳಿದಾಗ, ಪ್ರಾಂಶುಪಾಲರು ತನ್ನೊಂದಿಗೆ ಹಾಗೂ ಇತರ ಕೆಲವು ವಿದ್ಯಾರ್ಥಿನಿಯರೊಂದಿಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.
ತರಗತಿಯಲ್ಲಿ ಇತರ ವಿದ್ಯಾರ್ಥಿಗಳ ಮುಂದೆ ಮುಜುಗರ ಉಂಟಾಗುವ ರೀತಿಯಲ್ಲಿ ವೈಯಕ್ತಿಕ ವಿಚಾರಗಳ ಕುರಿತು ಮಾತನಾಡಿದ್ದರು ಎನ್ನಲಾಗಿದ್ದು, ಈ ಹಿಂದೆ ಕಾಲೇಜಿನ ಕಾರು ಪಾರ್ಕಿಂಗ್ ಪ್ರದೇಶದಲ್ಲಿ ಕೈಕುಲುಕುವುದು, ಹೆಗಲ ಮೇಲೆ ಕೈ ಹಾಕುವುದು ಹಾಗೂ ಸೊಂಟಕ್ಕೆ ಕೈ ಹಾಕುವುದು ಸೇರಿದಂತೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಾಂಶುಪಾಲರ ಇಂತಹ ವರ್ತನೆ ಪ್ರಥಮ ಪಿಯುಸಿಯಿಂದಲೇ ಮುಂದುವರಿದಿತ್ತು ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಆಗಸ್ಟ್ 18ರಂದು ವಿದ್ಯಾರ್ಥಿನಿಯಿಂದ ಹೇಳಿಕೆ ಪಡೆಯಲಾಗಿದ್ದು, ಅದರ ಆಧಾರದ ಮೇಲೆ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ಸಮಿತಿಯೂ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪರಿಶೀಲನೆಯ ಬಳಿಕ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…
ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…