ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

Shivamogga rural police arrested two accused for allegedly robbing a farmer at knifepoint near Kommanalu on Savalanga Road and stealing cash and a gold bracelet.

ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯ ಬಳಿ ಕಾರು ನಿಲ್ಲಿಸಿಕೊಂಡಿದ್ದ ವ್ಯಕ್ತಿಗೆ ಚಾಕು ತೋರಿಸಿ ಬೆದರಿಸಿ ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಮ್ಮನಾಳು ಗ್ರಾಮದ ಲಿಖಿತ್ ಹಾಗೂ ಬಿಕ್ಕೋನಹಳ್ಳಿಯ ದೀಪು ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸನಗರ ತಾಲೂಕಿನ ಮತ್ತಲಿ ಜಡ್ಡು ಗ್ರಾಮದ ರೈತ ಆರ್. ಸುಭಾಷ್ ಅವರು ದರೋಡೆಗೊಳಗಾದವರು. ಆ.14ರ ರಾತ್ರಿ ಸುಭಾಷ್ ಅವರು ತಮ್ಮ ಸ್ವಂತ ಕೆಲಸದ ನಿಮಿತ್ತ ಕಾರಿನಲ್ಲಿ ಸವಳಂಗಕ್ಕೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯ ಬಳಿ ಕಾರು ನಿಲ್ಲಿಸಿ ಮೂತ್ರವಿಸರ್ಜನೆಗೆ ತೆರಳಿದ್ದರು.

ಈ ವೇಳೆ ಹಿಂಬದಿಯಿಂದ ಬಂದ ಇಬ್ಬರು ಆರೋಪಿಗಳು ಚಾಕು ತೋರಿಸಿ ಬೆದರಿಸಿ ಸುಭಾಷ್ ಅವರಿಂದ ₹2 ಸಾವಿರ ನಗದು ಹಾಗೂ ಸುಮಾರು ₹90 ಸಾವಿರ ಮೌಲ್ಯದ 6 ಗ್ರಾಂ ತೂಕದ ಚಿನ್ನದ ಬ್ರಾಸ್‌ಲೆಟ್ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

15 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

15 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

17 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago