ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ
Shivamogga rural police arrested two accused for allegedly robbing a farmer at knifepoint near Kommanalu on Savalanga Road and stealing cash and a gold bracelet.
ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯ ಬಳಿ ಕಾರು ನಿಲ್ಲಿಸಿಕೊಂಡಿದ್ದ ವ್ಯಕ್ತಿಗೆ ಚಾಕು ತೋರಿಸಿ ಬೆದರಿಸಿ ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಮ್ಮನಾಳು ಗ್ರಾಮದ ಲಿಖಿತ್ ಹಾಗೂ ಬಿಕ್ಕೋನಹಳ್ಳಿಯ ದೀಪು ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸನಗರ ತಾಲೂಕಿನ ಮತ್ತಲಿ ಜಡ್ಡು ಗ್ರಾಮದ ರೈತ ಆರ್. ಸುಭಾಷ್ ಅವರು ದರೋಡೆಗೊಳಗಾದವರು. ಆ.14ರ ರಾತ್ರಿ ಸುಭಾಷ್ ಅವರು ತಮ್ಮ ಸ್ವಂತ ಕೆಲಸದ ನಿಮಿತ್ತ ಕಾರಿನಲ್ಲಿ ಸವಳಂಗಕ್ಕೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯ ಬಳಿ ಕಾರು ನಿಲ್ಲಿಸಿ ಮೂತ್ರವಿಸರ್ಜನೆಗೆ ತೆರಳಿದ್ದರು.
ಈ ವೇಳೆ ಹಿಂಬದಿಯಿಂದ ಬಂದ ಇಬ್ಬರು ಆರೋಪಿಗಳು ಚಾಕು ತೋರಿಸಿ ಬೆದರಿಸಿ ಸುಭಾಷ್ ಅವರಿಂದ ₹2 ಸಾವಿರ ನಗದು ಹಾಗೂ ಸುಮಾರು ₹90 ಸಾವಿರ ಮೌಲ್ಯದ 6 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…