ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ
Mother and three children jump into Tunga River in Shivamogga amid family dispute; mother and infant rescued, search continues for two missing girls.
ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗದ ಅರಕೆರೆ ದೇವಾಲಯದ ಬಳಿಯ ರೈಲ್ವೆ ಸೇತುವೆ ಬಳಿ ನಡೆದಿದೆ.
ನದಿಗೆ ಹಾರಿದ ತಾಯಿ ಹಾಗೂ 11 ತಿಂಗಳ ಗಂಡು ಮಗುವನ್ನು ಸ್ಥಳದಲ್ಲಿದ್ದ ನವೀನ್ ಹಾಗೂ ದಾದಾಪೀರ್ ಎಂಬ ಯುವಕರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಆದರೆ, 6 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ತೇಲಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಕ್ಕೆ ಮುಂದಾದರು. ಆದರೆ, ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ತೊಂದರೆಯಾಯಿತು.
ಚಿತ್ರದುರ್ಗ ಮೂಲದ ಭವಾನಿ ಎಂಬ ಮಹಿಳೆ ತಮ್ಮ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಮಹಿಳೆ ಹಾಗೂ ರಕ್ಷಿಸಲ್ಪಟ್ಟ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬವು ಪ್ರಸ್ತುತ ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ ವಾಸವಾಗಿತ್ತು ಎನ್ನಲಾಗಿದೆ.
ಸ್ಥಳಕ್ಕೆ ಎಎಸ್ಪಿ ಕಾರ್ಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಯಿ ಮತ್ತು ಮಗುವನ್ನು ರಕ್ಷಿಸಿದ ದಾದಾಪೀರ್ ಮಾತನಾಡಿ, ರೈಲ್ವೆ ಸೇತುವೆಯಿಂದ ಮಹಿಳೆಯೊಬ್ಬರು ಮೂವರು ಮಕ್ಕಳನ್ನು ಹಿಡಿದುಕೊಂಡು ನದಿಗೆ ಹಾರಿದ್ದನ್ನು ಗಮನಿಸಿದ ತಕ್ಷಣ ತಾವು ಹಾಗೂ ನವೀನ್ ನದಿಗೆ ಹಾರಿ ತಾಯಿ ಮತ್ತು ಒಂದು ಮಗುವನ್ನು ರಕ್ಷಿಸಿದ್ದಾಗಿ ತಿಳಿಸಿದ್ದಾರೆ. ಆದರೆ, ಉಳಿದ ಇಬ್ಬರು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ನದಿಗೆ ಹಾರಿ ಇಬ್ಬರು ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತುಂಗಾ ನದಿ ತಟದಲ್ಲಿ ಜಮಾಯಿಸಿ ಮಕ್ಕಳಿಗಾಗಿ ಶೋಧ ನಡೆಸುತ್ತಿದ್ದಾರೆ. ನದಿಯ ದಡ, ತಿರುವುಗಳು ಹಾಗೂ ನೀರಿನ ಹರಿವಿನ ಪ್ರದೇಶಗಳಲ್ಲಿ ಮಕ್ಕಳಿಗಾಗಿ ಹುಡುಕಾಟ ಮುಂದುವರಿದಿದೆ.
ಹಿಟ್ ಅಂಡ್ ರನ್; ಬೈಕ್ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…