ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ
Farmer from Thirthahalli loses ₹12.50 lakh after falling for a fake loan advertisement on YouTube. Cyber crime police have registered a case and begun investigation.
ತೀರ್ಥಹಳ್ಳಿ: ಯೂಟ್ಯೂಬ್ನಲ್ಲಿ ಪ್ರಸಾರವಾದ ಸಾಲ ನೀಡುವ ಜಾಹೀರಾತನ್ನು ನಂಬಿದ ತೀರ್ಥಹಳ್ಳಿಯ ರೈತರೊಬ್ಬರು ಬರೋಬ್ಬರಿ ₹12.50 ಲಕ್ಷ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 2ರಂದು ದೂರುದಾರರು ಯೂಟ್ಯೂಬ್ ವೀಕ್ಷಿಸುತ್ತಿದ್ದಾಗ ‘ಕಾವೇರಿ ಲೋನ್ ಸರ್ವೀಸ್’ ಹಾಗೂ ‘ಧನಿ ಫೈನಾನ್ಸ್’ ಹೆಸರಿನಲ್ಲಿ ಸಾಲ ನೀಡುವುದಾಗಿ ಜಾಹೀರಾತು ಕಾಣಿಸಿಕೊಂಡಿದೆ. ಸಾಲದ ಅಗತ್ಯವಿದ್ದ ಹಿನ್ನೆಲೆಯಲ್ಲಿ ಜಾಹೀರಾತಿನಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದಾಗ, ವಿವಿಧ ಮೊಬೈಲ್ ಸಂಖ್ಯೆಗಳ ಮೂಲಕ ವಾಟ್ಸಾಪ್ನಲ್ಲಿ ಸಂಪರ್ಕಿಸಲಾಗಿದೆ.
ವಂಚಕರು ಸಾಲ ನೀಡುವುದಾಗಿ ನಂಬಿಸಿ ಪ್ರೊಸೆಸಿಂಗ್ ಫೀ, ತೆರಿಗೆ ಹಾಗೂ ಸರ್ವಿಸ್ ಚಾರ್ಜ್ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಜುಲೈ 14ರಂದು ಸಾಲ ಮಂಜೂರಾಗಿದೆ ಎಂದು ತೋರಿಸುವ ನಕಲಿ ಅಗ್ರಿಮೆಂಟ್ ಪ್ರತಿಯನ್ನೂ ಕಳುಹಿಸಿದ್ದಾರೆ ಎನ್ನಲಾಗಿದೆ.
ಇದನ್ನು ನಂಬಿದ ರೈತರು ಜೂನ್ 2ರಿಂದ ಆಗಸ್ಟ್ 6ರವರೆಗೆ ವಂಚಕರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ₹12,50,078 ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಆದರೆ ಹಣ ವರ್ಗಾವಣೆ ಮಾಡಿದ ಬಳಿಕವೂ ಸಾಲದ ಮೊತ್ತ ನೀಡದೆ, ಮತ್ತೆ ಹಣ ಪಾವತಿಸುವಂತೆ ಆರೋಪಿಗಳು ಸೂಚಿಸಿದ್ದಾರೆ. ಇದರಿಂದ ಅನುಮಾನಗೊಂಡ ದೂರುದಾರರು ಪರಿಚಯಸ್ಥರಲ್ಲಿ ವಿಚಾರಿಸಿದಾಗ ತಾವು ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ.
ಕಾವೇರಿ ಲೋನ್ ಸರ್ವೀಸ್ ಹಾಗೂ ಧನಿ ಫೈನಾನ್ಸ್ ಹೆಸರಿನಲ್ಲಿ ನಂಬಿಸಿ ₹12.50 ಲಕ್ಷ ವಂಚಿಸಿರುವ ಆರೋಪಿಗಳನ್ನು ಪತ್ತೆಹಚ್ಚಿ, ಹಣವನ್ನು ವಾಪಸ್ ಕೊಡಿಸುವಂತೆ ದೂರುದಾರರು ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…