ರಿಪ್ಪನ್ ಪೇಟೆ : ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಉರುಳಿದ ಬೃಹತ್ ಮರ – ವಾಹನದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ
A huge tree fell on a moving Bolero pickup near Baruve, Rippon Pete, trapping the driver inside the vehicle. Police, Gram Panchayat staff, and locals rescued the driver, who escaped with minor injuries.
ರಿಪ್ಪನ್ ಪೇಟೆ, ಆ.1: ರಿಪ್ಪನ್ ಪೇಟೆ ಸಮೀಪದ ಬರುವೆ ಗ್ರಾಮದ ಆಚಾರ್ ಕೇರಿ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಬೊಲೆರೋ ಪಿಕಪ್ ವಾಹನದ ಮೇಲೆ ಬೃಹತ್ ಮರವೊಂದು ಏಕಾಏಕಿ ಉರುಳಿ ಬಿದ್ದ ಪರಿಣಾಮ ಚಾಲಕ ವಾಹನದಲ್ಲೇ ಸಿಲುಕಿಕೊಂಡ ಘಟನೆ ನಡೆದಿದೆ.
ಮದೀನಾ ಕಾಲೋನಿ ನಿವಾಸಿ ತೌಸಿಫ್ ಅವರು ಟಾಟಾ ಏಸ್ ವಾಹನದಲ್ಲಿ ತರಕಾರಿ ಮಾರಾಟ ಮುಗಿಸಿ ಬರುವೆ ಗ್ರಾಮದ ಆಚಾರ್ ಕೇರಿ ಭಾಗದ ಮೂಲಕ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಳೆ ಹಾಗೂ ಗಾಳಿಯ ಪರಿಣಾಮ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ವಾಹನದ ಮೇಲೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ಇದೇ ವೇಳೆ ಸ್ಥಳೀಯ ನಿವಾಸಿಗಳೂ ಸಹ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿ, ವಾಹನದಲ್ಲಿ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಹರಸಾಹಸ ಪಟ್ಟರು.
ಅದೃಷ್ಟವಶಾತ್ ಚಾಲಕ ಗಂಭೀರ ಗಾಯಗಳಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಮರದ ಇನ್ನಷ್ಟು ಕೊಂಬೆಗಳು ಕುಸಿಯುವ ಭೀತಿ ಇದ್ದ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್