ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

Bhadravati police arrested a man accused of cheating a woman in the name of black magic and recovered 161 grams of gold ornaments and gold bullion worth ₹22.5 lakh.

ಭದ್ರಾವತಿ: ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣ ಪಡೆದು ವಂಚಿಸಿದ ಆರೋಪಿಯನ್ನು ಹೊಸಮನೆ ಪೊಲೀಸರು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

ಭದ್ರಾವತಿ ಗಾಂಧಿನಗರದ ನಿವಾಸಿ ಹಾಗೂ ಕೆಎಸ್‌ಆರ್‌ಟಿಸಿ ಕಿರಿಯ ಸಹಾಯಕಿಯಾಗಿರುವ 36 ವರ್ಷದ ಮಂಗಳ ನಾಯಕ್ ಅವರು ಸೆಪ್ಟೆಂಬರ್ 7ರಂದು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಪ್ರಕಾರ, ಮುರಳಿ ಮತ್ತು ಆತನ ಸಹೋದರ ರವಿ ಎಂಬವರು ಮಂಗಳ ನಾಯಕ್ ಅವರಿಗೆ ಪರಿಚಯವಾಗಿದ್ದರು. ಬಳಿಕ, ನಿಮ್ಮ ಮೇಲೆ ವಾಮಾಚಾರ ಪ್ರಯೋಗವಾಗಿದ್ದು, ಅದನ್ನು ತೆಗೆಸದೇ ಹೋದರೆ ನಿಮಗೂ ಹಾಗೂ ನಿಮ್ಮ ಮಕ್ಕಳಿಗೂ ದೊಡ್ಡ ಮಟ್ಟದ ಸಮಸ್ಯೆಯಾಗಲಿದೆ ಎಂದು ನಂಬಿಸಿದ್ದಾರೆ ಎನ್ನಲಾಗಿದೆ.

ನಂತರ ಮನೆಗೆ ಬಂದು ಪೂಜೆ ನಡೆಸಿದ ಆರೋಪಿಗಳು, ಪೂಜೆ ಪೂರ್ಣಗೊಂಡ ಬಳಿಕ ಬಂಗಾರದ ಒಡವೆಗಳನ್ನು ತಮ್ಮ ಬಳಿ ನೀಡುವಂತೆ ತಿಳಿಸಿದ್ದಾರೆ. ಅವುಗಳನ್ನು ತಮ್ಮ ಮನೆಗೆ ಕೊಂಡೊಯ್ದು ವಿಶೇಷ ಪೂಜೆ ಮಾಡಿ ವಾಪಸ್ ನೀಡುವುದಾಗಿ ಹೇಳಿ ಮಹಿಳೆಯನ್ನು ನಂಬಿಸಿ, ಸುಮಾರು 193 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ಹಣ ಪಡೆದುಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.155/2026, ಬಿಎನ್‌ಎಸ್ ಕಲಂ 316(2), 318(4) ಸಹಿತ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗಿದ ಕೆಲವೇ ಗಂಟೆಗಳಲ್ಲಿ ಮುರುಳಿ ಅಲಿಯಾಸ್ ಕರಿಯಾ, 31 ವರ್ಷ, ತಿಪ್ಲಾಪುರ ಕ್ಯಾಂಪ್, ಭದ್ರಾವತಿ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರವಿ ಅಂಗಡಿಯಲ್ಲಿ ಅಡವಿಟ್ಟಿದ್ದ ಹಾಗೂ ಚಿನ್ನವನ್ನು ಕರಗಿಸಿ ಗಟ್ಟಿಯಾಗಿ ಮಾಡಿಕೊಂಡು ಮನೆಯಲ್ಲಿ ಬಚ್ಚಿಟ್ಟಿದ್ದ ಒಟ್ಟು ಸುಮಾರು ₹22.50 ಲಕ್ಷ ಮೌಲ್ಯದ 161 ಗ್ರಾಂ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಹಾಗೂ ಮಾಲು ಪತ್ತೆಗಾಗಿ ಭದ್ರಾವತಿ ಉಪವಿಭಾಗದ ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ, ನಗರ ವೃತ್ತದ ಸಿಪಿಐ ನಾಗಮ್ಮ ಅವರ ಮಾರ್ಗದರ್ಶನದಲ್ಲಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದಪ್ಪ ಎಂ.ಪಿ. ಹಾಗೂ ಸಿಬ್ಬಂದಿಗಳಾ ಆದರ್ಶ ಶೆಟ್ಟಿ, ಮನ್ಸೂದ್ ಖಾನ್, ಆಸ್ಟೀನ್,  ಕಾಂತರಾಜ ಬಿ ಎನ್. ಹಣಮಂತ ಅವಟಿ, ಸುನೀತಾ ໖໐,  ಶ್ರೀಧರ ರವರ ಒಳಗೊಂಡ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ತಂಡದ ಕಾರ್ಯವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಅವರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 hour ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

5 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

7 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

8 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

17 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 day ago