ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?
Illegal liquor sale is allegedly taking place openly at grocery shops and hotels in Heddaripur village, prompting public anger and demands for strict action by the Excise Department.
ಹೆದ್ದಾರಿಪುರ ಗ್ರಾಮದ ಮೂಲೆ ಮೂಲೆಯಲ್ಲಿರುವ ಸಣ್ಣ ಪುಟ್ಟ ಕಿರಾಣಿ ಅಂಗಡಿಗಳು ಹಾಗೂ ಹೋಟೆಲ್ಗಳಲ್ಲಿ ಇದೀಗ ಅಕ್ರಮ ಮದ್ಯ ಮಾರಾಟವು ಯಾವುದೇ ಲಂಗು ಲಗಾಮಿಲ್ಲದೆ, ರಾಜಾರೋಷವಾಗಿ ನಡೆಯುತ್ತಿದೆ. ಹಗಲು ರಾತ್ರಿ ಎನ್ನದೆ ಕಣ್ಣೆದುರೇ ಇಷ್ಟೆಲ್ಲಾ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ, ಇದನ್ನು ತಡೆಗಟ್ಟಿ ವ್ಯವಸ್ಥೆ ಕಾಪಾಡಬೇಕಾದ ಜವಾಬ್ದಾರಿ ಹೊತ್ತಿರುವ ಅಬಕಾರಿ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ಕಣ್ಣು, ಕಿವಿ ಮುಚ್ಚಿಕೊಂಡು ಕುಳಿತಿರುವ ಅಧಿಕಾರಿಗಳ ಈ ದಿವ್ಯ ನಿರ್ಲಕ್ಷ್ಯದ ವಿರುದ್ಧ ಇದೀಗ ಸಾರ್ವಜನಿಕರ ಆಕ್ರೋಶ ಕಟ್ಟೆ ಒಡೆದಿದೆ.
ಗ್ರಾಮದ ಈ ಅಕ್ರಮ ಮದ್ಯದ ಅಡ್ಡೆಗಳಲ್ಲಿ ದಂಧೆಕೋರರು ನಿಗದಿತ ದರಕ್ಕಿಂತ ದುಪ್ಪಟ್ಟು ಹಣವನ್ನು ವಸೂಲಿ ಮಾಡುತ್ತಾ ಹಗಲು ದರೋಡೆಗೆ ಇಳಿದಿದ್ದಾರೆ. ಕುಡುಕರು ಮದ್ಯದ ದಾಸರಾಗಿ ದುಪ್ಪಟ್ಟು ಹಣ ಪಾವತಿಸಿ ಮದ್ಯ ಖರೀದಿಸುತ್ತಿದ್ದು, ಇದರಿಂದ ಬಡವರ ಹಾಗೂ ಕೂಲಿ ಕಾರ್ಮಿಕರ ಸಂಸಾರಗಳು ಅಕ್ಷರಶಃ ಬೀದಿಗೆ ಬೀಳುತ್ತಿವೆ. ಗ್ರಾಮದ ಸ್ವಾಸ್ಥ್ಯವನ್ನು ಸಂಪೂರ್ಣವಾಗಿ ಹಾಳುಮಾಡುತ್ತಿರುವ ಈ ದುಪ್ಪಟ್ಟು ಸುಲಿಗೆಗೆ ಹಾಗೂ ಅಕ್ರಮ ಮಾರಾಟಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಅತ್ಯಂತ ಕಟುವಾಗಿ ಒತ್ತಾಯಿಸುತ್ತಿದ್ದಾರೆ.
ಇಷ್ಟೆಲ್ಲಾ ಅಕ್ರಮವಾಗಿ ಹಳ್ಳಿ ಹಳ್ಳಿಯ ಅಂಗಡಿಗಳಿಗೆ ಮದ್ಯ ಪೂರೈಕೆ ಆಗುತ್ತಿರುವುದಾದರೂ ಎಲ್ಲಿಂದ? ಈ ಕಳ್ಳ ಅಂಗಡಿಗಳಿಗೆ ಎಗ್ಗಿಲ್ಲದೆ ಮದ್ಯ ಸರಬರಾಜು ಮಾಡುತ್ತಿರುವ ಆ ಪ್ರಭಾವಿ ಬಾರ್ ಮಾಲೀಕರು ಯಾರು? ಕದ್ದುಮುಚ್ಚಿ ಅಕ್ರಮವಾಗಿ ಮದ್ಯ ಪೂರೈಸುವ ಅವರ ಮೂಲವನ್ನು ಪತ್ತೆಹಚ್ಚಿ, ಆ ಬಾರ್ ಲೈಸೆನ್ಸ್ ಅನ್ನು ಕೂಡಲೇ ನಿರ್ದಾಕ್ಷಿಣ್ಯವಾಗಿ ರದ್ದುಗೊಳಿಸಬೇಕು. ಇಂತಹ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಮಾತ್ರ ಈ ದಂಧೆಗೆ ಶಾಶ್ವತ ಬ್ರೇಕ್ ಹಾಕಲು ಸಾಧ್ಯ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ಇನ್ನು ಅಬಕಾರಿ ಇನ್ಸ್ಪೆಕ್ಟರ್ಗಳ ಕಾರ್ಯವೈಖರಿ ನೋಡಿದರೆ ಅಸಹ್ಯವಾಗುತ್ತದೆ. ‘ನಮಗೂ ಈ ಅಕ್ರಮ ಮದ್ಯ ಮಾರಾಟಕ್ಕೂ ಯಾವುದೇ ಸಂಬಂಧವೇ ಇಲ್ಲ’ ಎಂಬಂತೆ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಸಾರ್ವಜನಿಕರಿಗೆ ತೀವ್ರ ಅಚ್ಚರಿ ಎಂದರೆ, ಕಳೆದ ಒಂದು ವರ್ಷದ ಅವಧಿಯಲ್ಲಿ ಇಡೀ ತಾಲೂಕಿನ ವ್ಯಾಪ್ತಿಯಲ್ಲಿ ಒಂದೇ ಒಂದು ಅಕ್ರಮ ಮದ್ಯ ಮಾರಾಟದ ಪ್ರಕರಣವನ್ನು ಈ ಇಲಾಖೆ ದಾಖಲು ಮಾಡಿಲ್ಲ! ಕಣ್ಣೆದುರೇ ಇಷ್ಟೊಂದು ಅಕ್ರಮ ನಡೆಯುತ್ತಿದ್ದರೂ, ಒಂದೇ ಒಂದು ಕೇಸ್ ದಾಖಲಿಸಿಲ್ಲ ಎಂದರೆ, ಈ ಅಬಕಾರಿ ಇಲಾಖೆ ಇರುವುದು ಯಾವ ಪುರುಷಾರ್ಥಕ್ಕೆ?
ತಮ್ಮ ಅಸಲಿ ಜವಾಬ್ದಾರಿಯಾದ ಅಕ್ರಮ ಮದ್ಯ ಮಾರಾಟ ತಡೆಯುವ ಹಾಗೂ ದಾಳಿ ಮಾಡುವ ಕೆಲಸವನ್ನು ಸಂಪೂರ್ಣವಾಗಿ ಕೈಬಿಟ್ಟಿರುವ ಅಬಕಾರಿ ಅಧಿಕಾರಿಗಳು, ಆ ಜವಾಬ್ದಾರಿಯನ್ನು ಪೊಲೀಸರ ತಲೆಗೆ ಕಟ್ಟಿ ತಾವು ಸೇಫ್ ಆಗುವ ನಾಟಕವಾಡುತ್ತಿದ್ದಾರೆ. ಅಕ್ರಮವನ್ನು ತಡೆಯುವುದನ್ನು ಬಿಟ್ಟು, ತಾವು ಮಾತ್ರ ಆರಾಮಾಗಿ ಕಛೇರಿಯಲ್ಲಿ ಕುಳಿತು ಕೇವಲ ಇಲಾಖೆಯ ಟಾರ್ಗೆಟ್ ಕಂಪ್ಲೀಟ್ ಮಾಡುವುದನ್ನೇ ತಮ್ಮ ಏಕೈಕ ಕಾಯಕ ಮಾಡಿಕೊಂಡಿರುವ ಅಬಕಾರಿ ಇಲಾಖೆಗೆ ನಿಜಕ್ಕೂ ನಾಚಿಕೆಯಾಗಬೇಕು.
ಕೂಡಲೇ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳು ನಿದ್ದೆಯಿಂದ ಎಚ್ಚೆತ್ತು, ಈ ಗಂಭೀರ ವಿಚಾರದ ಕಡೆಗೆ ತಕ್ಷಣವೇ ಗಮನಹರಿಸಬೇಕು. ಹೆದ್ದಾರಿಪುರದಲ್ಲಿ ನಡೆಯುತ್ತಿರುವ ಈ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವಜನಿಕರ ಒಕ್ಕೊರಲಿನ ಆಗ್ರಹವಾಗಿದೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…