ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ
Hosanagara Hindu Mahasabha Committee is all set to celebrate its 8th annual public Ganeshotsava from September 14 to 28, 2026, featuring religious, cultural, sports and social programmes.
ಹೊಸನಗರ : ಪಟ್ಟಣದ ವೀರ ಸಾವರ್ಕರ್ ಮಂಟಪದಲ್ಲಿ ಹೊಸನಗರ ಹಿಂದೂ ಮಹಾಸಭಾ ಸಮಿತಿ ವತಿಯಿಂದ ಆಯೋಜಿಸಿರುವ ಎಂಟನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವಕ್ಕೆ ಸರ್ವ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ.
ಸೆಪ್ಟೆಂಬರ್ 14ರಿಂದ 28ರವರೆಗೆ ಒಟ್ಟು 15 ದಿನಗಳ ಕಾಲ ನಡೆಯಲಿರುವ ಗಣೇಶೋತ್ಸವವು ಸೆ.14ರಂದು ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಶೋಭಾಯಾತ್ರೆಯೊಂದಿಗೆ ಆರಂಭವಾಗಲಿದ್ದು, ಸೆ.28ರಂದು ನಡೆಯಲಿರುವ ಬೃಹತ್ ವಿಸರ್ಜನಾ ಶೋಭಾಯಾತ್ರೆ ಹಿಂದೂ ದಿಗ್ವಿಜಯ ಯಾತ್ರೆಯೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಸಮಿತಿಯ ಗೌರವ ಸಂಚಾಲಕ ವಿನಾಯಕ ಶ್ರೇಷ್ಠಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಭಜನೆ, ಸಂಗೀತ, ನೃತ್ಯ ಸೇರಿದಂತೆ ವಿವಿಧ ಕಾರ್ಯಕ್ರಮ
ಉತ್ಸವದ ಅಂಗವಾಗಿ ಸುಮಾರು 21 ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಇದರೊಂದಿಗೆ ಎರಡು ಭರತನಾಟ್ಯ ಕಾರ್ಯಕ್ರಮಗಳು, ಗಮಕ ಕಾರ್ಯಕ್ರಮ, ಕೆರೋಕೆ ಸಂಗೀತ ಸಂಜೆ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ವಿಶ್ವ ಶಾಂತಿ ಮತ್ತು ಕಲ್ಯಾಣಕ್ಕಾಗಿ ಹಾಗೂ ಸಂಘಟಿತ-ಸಮರಸ ಹಿಂದೂ ಸಮಾಜದ ನಿರ್ಮಾಣಕ್ಕಾಗಿ ಸಂಕಲ್ಪ ಕೈಗೊಂಡು ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮಹಾ ಅನ್ನಸಂತರ್ಪಣೆ ಸೇರಿದಂತೆ ಹಲವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಧಾನ ಸಂಚಾಲಕ ಗಣೇಶ್ ಮಧುಕರ್ ಮಾಹಿತಿ ನೀಡಿದರು.
ಉತ್ಸವದ ಅಂಗವಾಗಿ ಚೆಸ್ ಸ್ಪರ್ಧೆ, ವಿಜ್ಞಾನ ಮೇಳ ಪ್ರದರ್ಶನ ಮತ್ತು ಸ್ಪರ್ಧೆ, ಚರ್ಚಾ ಸ್ಪರ್ಧೆ, ಕರಾಟೆ ಪ್ರದರ್ಶನ ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಇದಲ್ಲದೆ, ತಾಯಂದಿರು ಹಾಗೂ 10 ವರ್ಷದೊಳಗಿನ ಮಕ್ಕಳಿಗಾಗಿ ‘ಯಶೋಧಾ-ಕೃಷ್ಣ’ ಛದ್ಮವೇಷ ಸ್ಪರ್ಧೆ ಕೂಡ ನಡೆಯಲಿದೆ ಎಂದು ಸಾಂಸ್ಕೃತಿಕ ಪ್ರಭಾರಿ ಮಂಜುನಾಥ್ ಪೂಜಾರಿ ತಿಳಿಸಿದರು.
ಸಮಿತಿಯ ವತಿಯಿಂದ ನಡೆಯಲಿರುವ ಎಲ್ಲಾ ಸ್ಪರ್ಧೆಗಳು ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಸಮಾಜದ ಸಜ್ಜನ ಬಂಧುಗಳು, ಮಾತಾ-ಭಗಿನಿಯರು ಹಾಗೂ ಕುಟುಂಬ ಸಮೇತರಾಗಿ ಭಾಗವಹಿಸುವ ಮೂಲಕ ಉತ್ಸವದ ಸಂಭ್ರಮವನ್ನು ಹೆಚ್ಚಿಸಬೇಕೆಂದು ಕಾರ್ಯಸಂಚಾಲಕ ಅನೂಪ ಅರವಿಂದ್ ಸುದ್ದಿಗೋಷ್ಠಿ ಮೂಲಕ ಸಾರ್ವಜನಿಕರಿಗೆ ಆಹ್ವಾನ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪೂರ್ವ ಗೌರವ ಸಂಚಾಲಕರು, ಪ್ರಧಾನ ಸಂಚಾಲಕರು, ಕಾರ್ಯಸಂಚಾಲಕರು, ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…