ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ
Kudumallige Society CEO Madan, who went missing after leaving his car in a forest near Ripponpete, has been found safely in Bhatkal and returned home, bringing the case to a happy ending.
ರಿಪ್ಪನ್ಪೇಟೆ: ರಿಪ್ಪನ್ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬಳ್ಳಿ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ತಮ್ಮ ಕಾರನ್ನು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮದನ್ ಅವರು ಸುರಕ್ಷಿತವಾಗಿ ಪತ್ತೆಯಾಗಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.
ಮದನ್ ಅವರು ಭಟ್ಕಳದಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದು, ಬಳಿಕ ಮನೆಗೆ ಮರಳಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಈ ಕುರಿತು ಕುಡುಮಲ್ಲಿಗೆ ಸೊಸೈಟಿಯ ನಿರ್ದೇಶಕ ಸಂಜಯ್ ಅವರು ಕೂಡ ಮದನ್ ಸುರಕ್ಷಿತವಾಗಿ ಮನೆಗೆ ಮರಳಿರುವುದನ್ನು ದೃಢಪಡಿಸಿದ್ದಾರೆ.
ಮದನ್ ಅವರ ಮಾರುತಿ ಸ್ವಿಫ್ಟ್ ಕಾರು ಜಂಬಳ್ಳಿ ಸಮೀಪದ ನಿರ್ಜನ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಕಾರಿನ ಕೀಲಿಕೈಯನ್ನು ಸ್ಥಳದಲ್ಲೇ ಬಿಟ್ಟು ಹೋಗಲಾಗಿದ್ದು, ಕಾರಿನೊಳಗೆ ಮದನ್ ಅವರ ಮೊಬೈಲ್ ಫೋನ್ ಹಾಗೂ ಸೊಸೈಟಿಗೆ ಸಂಬಂಧಿಸಿದ ಮಹತ್ವದ ಲೆಕ್ಕದ ಪುಸ್ತಕಗಳು ಪತ್ತೆಯಾಗಿದ್ದವು.
ಈ ಘಟನೆ ಸ್ಥಳೀಯರು ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆತಂಕ ಮೂಡಿಸಿತ್ತು. ಕಾರು ಪತ್ತೆಯಾದ ನಂತರ ಕುಟುಂಬಸ್ಥರು, ಸ್ಥಳೀಯರು ಹಾಗೂ ಸಾರ್ವಜನಿಕರು ಜಂಬಳ್ಳಿ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದರು.
ಮೂಲಗಳ ಮಾಹಿತಿಯ ಪ್ರಕಾರ, ಮದನ್ ಅವರು ಶುಕ್ರವಾರ ತೀರ್ಥಹಳ್ಳಿಯಲ್ಲಿರುವ ತಮ್ಮ ನಿವಾಸದಿಂದ ಹೊರಬಂದಿದ್ದರು. ನಂತರ ಅವರ ಸುಳಿವು ಸಿಗದೆ ಆತಂಕ ಉಂಟಾಗಿತ್ತು. ಇದೇ ವೇಳೆ ಅವರ ಕಾರು ರಿಪ್ಪನ್ಪೇಟೆ ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದರಿಂದ ಪ್ರಕರಣ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿತ್ತು.
ಸೊಸೈಟಿಗೆ ಸಂಬಂಧಿಸಿದ ಕೆಲವು ಬೆಳವಣಿಗೆಗಳು ಹಾಗೂ ಭ್ರಷ್ಟಾಚಾರ ಕುರಿತ ದೂರುಗಳ ಹಿನ್ನೆಲೆಯಲ್ಲಿ ಮದನ್ ಅವರ ನಾಪತ್ತೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿತ್ತು.
ಆದರೆ ಇದೀಗ ಮದನ್ ಅವರು ಸುರಕ್ಷಿತವಾಗಿ ಪತ್ತೆಯಾಗಿದ್ದು ಮನೆಗೆ ಮರಳಿರುವುದರಿಂದ ಕುಟುಂಬಸ್ಥರು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಆದರೆ, ನಿರ್ಜನ ಅರಣ್ಯ ಪ್ರದೇಶದಲ್ಲಿ ಕಾರನ್ನು ಬಿಟ್ಟು, ಮೊಬೈಲ್ ಹಾಗೂ ಇತರ ದಾಖಲೆಗಳನ್ನು ಕಾರಿನಲ್ಲೇ ಉಳಿಸಿ ಮದನ್ ಅವರು ಏಕೆ ತೆರಳಿದ್ದರು? ಅವರು ಭಟ್ಕಳಕ್ಕೆ ಹೇಗೆ ತಲುಪಿದರು? ಎಂಬ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯಿಂದಲೇ ಸ್ಪಷ್ಟ ಉತ್ತರ ದೊರೆಯಬೇಕಿದೆ.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…