ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

Shivamogga Minister Madhu Bangarappa made a surprise visit to the new cardiology hospital at McGann Hospital and Ayanur Government School, reviewed facilities, patient care, shoes and socks quality, and assured action on a ₹6 crore equipment funding request.

ಶಿವಮೊಗ್ಗ, ಸೆ. 11: ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ನೂತನ ಹೃದ್ರೋಗ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಕಾರ್ಯವೈಖರಿ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಪರಿಶೀಲಿಸಿದರು.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಕಾರಿಪುರದಲ್ಲಿ ಕಾಂಗ್ರೆಸ್ ಯುವ ಘಟಕ ಆಯೋಜಿಸಿದ್ದ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಯಾವುದೇ ಮುನ್ಸೂಚನೆ ನೀಡದೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಹೃದ್ರೋಗ ವಿಭಾಗದಲ್ಲಿರುವ ವಿವಿಧ ಸೌಲಭ್ಯಗಳನ್ನು ವೀಕ್ಷಿಸಿದರು.

ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿರುವ ನಾಲ್ಕು ಮಾಡ್ಯುಲರ್ ಶಸ್ತ್ರಚಿಕಿತ್ಸಾ ಕೊಠಡಿಗಳು (Modular OT) ಹಾಗೂ ಕ್ಯಾಥ್‌ಲ್ಯಾಬ್‌ ಸೌಲಭ್ಯಗಳನ್ನು ಪರಿಶೀಲಿಸಿದ ಸಚಿವರು, ವೈದ್ಯಕೀಯ ಉಪಕರಣಗಳ ಗುಣಮಟ್ಟ ಮತ್ತು ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ಹೃದ್ರೋಗ ವಿಭಾಗದ ಮುಖ್ಯಸ್ಥರು, ವಿಶೇಷ ಅಧಿಕಾರಿಗಳು ಹಾಗೂ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ವಿಭಾಗದ ಕಾರ್ಯನಿರ್ವಹಣೆ, ಚಿಕಿತ್ಸಾ ವ್ಯವಸ್ಥೆ ಮತ್ತು ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ರೋಗಿಗಳಿಗೆ ತುರ್ತು ಚಿಕಿತ್ಸೆ ಸಕಾಲದಲ್ಲಿ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆಯ ಕುರಿತು ಮೆಡಿಕಲ್ ಡೀನ್ ಡಾ. ರಮೇಶ್ ಬಾಬು ಅವರು ಸಚಿವರ ಗಮನಕ್ಕೆ ತಂದರು. ನಾಲ್ಕು ಮಾಡ್ಯುಲರ್ ಓಟಿ ಕೊಠಡಿಗಳಿಗೆ ಅಗತ್ಯವಿರುವ ಬಾಕಿ ಯಂತ್ರೋಪಕರಣಗಳನ್ನು ಅಳವಡಿಸಲು ಸುಮಾರು ₹6 ಕೋಟಿ ಅನುದಾನ ಅಗತ್ಯವಿದೆ ಎಂದು ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಲಿಖಿತ ಮನವಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ, ಅಗತ್ಯ ಅನುದಾನವನ್ನು ಶೀಘ್ರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹೃದ್ರೋಗ ವಿಭಾಗಕ್ಕೆ ಚಿಕಿತ್ಸೆಗಾಗಿ ಹಾಗೂ ಹೊರರೋಗಿಗಳಾಗಿ ಆಗಮಿಸುವ ಸಾರ್ವಜನಿಕರಿಗೆ ತುರ್ತು ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಕಲ್ಪಿಸಬೇಕು. ರೋಗಿಗಳು ಸರತಿ ಸಾಲಿನಲ್ಲಿ ಅನಗತ್ಯವಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಸಚಿವರು ಸೂಚಿಸಿದರು. ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆಯೂ ಕೂಡಲೇ ಗಮನ ಹರಿಸುವಂತೆ ಆಸ್ಪತ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಚಿವರು ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಭೇಟಿಯಾಗಿ, ಅವರಿಗೆ ದೊರೆಯುತ್ತಿರುವ ಚಿಕಿತ್ಸೆಯ ಕುರಿತು ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮೆಡಿಕಲ್ ಡೀನ್ ಡಾ. ರಮೇಶ್ ಬಾಬು, ಹೃದ್ರೋಗ ವಿಭಾಗದ ಮುಖ್ಯಸ್ಥ ಹಾಗೂ ವಿಶೇಷ ಅಧಿಕಾರಿ ಡಾ. ಪರಮೇಶ್ವರ, ಹೃದಯರೋಗ ತಜ್ಞ ಡಾ. ಮಹೇಶ್ ಮೂರ್ತಿ ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಆಯನೂರು ಸರ್ಕಾರಿ ಶಾಲೆಗೂ ಸಚಿವರ ದಿಢೀರ್ ಭೇಟಿ

ಈಸೂರಿಗೆ ತೆರಳುವ ಮಾರ್ಗಮಧ್ಯೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಆಯನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೂ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ ನೀಡಿ, ಶೈಕ್ಷಣಿಕ ಚಟುವಟಿಕೆಗಳು ಹಾಗೂ ಶಾಲೆಯಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸಾಕ್ಸ್‌ಗಳು ಎಲ್ಲ ವಿದ್ಯಾರ್ಥಿಗಳಿಗೆ ದೊರೆತಿವೆಯೇ ಎಂದು ವಿಚಾರಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗಿರುವ ಶೂ-ಸಾಕ್ಸ್‌ಗಳ ಗುಣಮಟ್ಟವನ್ನೂ ಪರಿಶೀಲಿಸಿದರು.

ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟ ತೃಪ್ತಿಕರವಾಗಿದ್ದು, ಪೋಷಕರೂ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ವಿದ್ಯಾರ್ಥಿಗಳು ಸಚಿವರಿಗೆ ತಿಳಿಸಿದರು. ಶೂ-ಸಾಕ್ಸ್‌ಗಳ ಗುಣಮಟ್ಟದ ಕುರಿತು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಚಿವರು ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದರು.

ಈ ವೇಳೆ ವಿದ್ಯಾರ್ಥಿನಿಯೊಬ್ಬರು ಶಾಲೆಯ ಶೌಚಾಲಯ ವ್ಯವಸ್ಥೆ ಸರಿಪಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಕೂಡಲೇ ಶಾಲೆಯ ನೈರ್ಮಲ್ಯ, ಶೌಚಾಲಯ ವ್ಯವಸ್ಥೆ ಹಾಗೂ ಬಿಸಿಯೂಟದ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಯ ಮೇಲ್ಚಾವಣಿ ದುರಸ್ತಿ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆಯೂ ನಿರ್ದೇಶನ ನೀಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 hour ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 hour ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

7 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

8 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago