ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ
Rippanpete Ganeshotsava 2026: Karnataka Prantha Hindu Rashtra Sena Samiti organizes the 59th public Ganapati festival from September 14 to 24 with religious and cultural programs.
ರಿಪ್ಪನ್ಪೇಟೆ: ಭಕ್ತಿ ಮತ್ತು ಸಂಭ್ರಮದ ಸಮ್ಮಿಲನಕ್ಕೆ ರಿಪ್ಪನ್ಪೇಟೆ ಸಾಕ್ಷಿಯಾಗಲಿದ್ದು, ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ವತಿಯಿಂದ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ವೇದಿಕೆ ಸಜ್ಜಾಗಿದೆ. ಸೆಪ್ಟೆಂಬರ್ 14ರಿಂದ 24ರವರೆಗೆ ಬರೋಬ್ಬರಿ 11 ದಿನಗಳ ಕಾಲ ಶಿವಮೊಗ್ಗ ರಸ್ತೆಯ ವರಸಿದ್ಧಿವಿನಾಯಕ ದೇವಸ್ಥಾನದ ಹಿಂಭಾಗದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ವೈವಿಧ್ಯಮಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಗೇರಲಿವೆ.
ಸಮಿತಿಯ ಅಧ್ಯಕ್ಷ ಸುಧೀಂದ್ರ ಪೂಜಾರಿ ಹಾಗೂ ಪ್ರಧಾನ ಕಾರ್ಯದರ್ಶಿ ನವೀನ್ ಎಂ. ನೇತೃತ್ವದಲ್ಲಿ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಸೆಪ್ಟೆಂಬರ್ 14ರಂದು ಬೆಳಗ್ಗೆ ಸ್ವಾಮಿ ಸಿದ್ಧಿ ವಿನಾಯಕನ ಪ್ರತಿಷ್ಠಾಪನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ.
ಸೆ. 15: ರಿಪ್ಪನ್ಪೇಟೆ ಶಾರದಾ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸುಶ್ರಾವ್ಯ ಸಂಗೀತ ಕಾರ್ಯಕ್ರಮ.
ಸೆ. 16: ಅಲಸೆ ಚಂಡಿಕೇಶ್ವರಿ ಮೇಳದ ಕಲಾವಿದರಿಂದ ‘ಶೂರ್ಪನಖಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ.
ಸೆ. 17: ಗವಟೂರು ಸರ್ಕಾರಿ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ರಸಮಂಜರಿ.
ಸೆ. 18: ಶಿಕ್ಷಕ ತೀರ್ಥಕುಮಾರ್ ಸಾರಥ್ಯದ ಹಂಸವೇಣಿ ಕಲಾ ತಂಡದಿಂದ ರಸಮಂಜರಿ.
ಸೆ. 19: ಶಾರದಾಂಬ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಭರತನಾಟ್ಯ ಹಾಗೂ ಕುಂದಾಪುರದ ಕವಿತಾ ಆಚಾರ್ಯ ಮುದೂರು ಅವರಿಂದ ದಿಕ್ಸೂಚಿ ಭಾಷಣ.
ಸೆ. 20: ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದಿಂದ ‘ಸಂಗೀತ ಗಾನ ಸಂಭ್ರಮ.
ಸೆ. 21: ಉಪ್ಪಾಡಿ ತ್ರಿನೇತ್ರ ಕಲಾ ತಂಡದಿಂದ ಹೊಟ್ಟೆ ಹುಣ್ಣಾಗಿಸುವ ಹಾಸ್ಯ ನಾಟಕ ‘ತಿರುಪತಿ ಎಕ್ಸ್ಪ್ರೆಸ್’.
ಸೆ. 22: ಸುಧಾ ಗೌಡ ಮತ್ತು ತಂಡದಿಂದ ಮಧುರ ಸಂಗೀತ ರಸಮಂಜರಿ.
ಸೆ. 23: ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಕಣ್ಮನ ಸೆಳೆಯುವ ‘ನೃತ್ಯ ವೈಭವ’.
ಸೆಪ್ಟೆಂಬರ್ 24ರಂದು ಮಧ್ಯಾಹ್ನ 12.30ಕ್ಕೆ ಗಣೇಶನ ವಿಸರ್ಜನಾ ಪೂಜೆ ನೆರವೇರಲಿದ್ದು, ತದನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀಯವರ ಅದ್ದೂರಿ ರಾಜಬೀದಿ ಉತ್ಸವ (ಶೋಭಾಯಾತ್ರೆ) ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಬಾರಿಯ ಉತ್ಸವವನ್ನು ಯಶಸ್ವಿಗೊಳಿಸುವಂತೆ ಸಮಿತಿ ಕೋರಿದೆ.
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…