ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ
Kalluru Meghraj urges the Karnataka government to add ‘Fr’ (Farmer) before farmers’ names in land records, RTC and mutation documents, while demanding the cancellation of second and fourth Saturday holidays for government employees.
ರಿಪ್ಪನ್ಪೇಟೆ: ವೈದ್ಯರು, ಪ್ರಾಧ್ಯಾಪಕರು ಹಾಗೂ ನ್ಯಾಯಮೂರ್ತಿಗಳ ಹೆಸರಿನಂತೆ ಶಿಕ್ಷಕರ ಹೆಸರಿನ ಮುಂದೆಯೂ ‘Tr’ ಅಂಕಿತ ಬಳಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಸೂಚನೆಯನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಸ್ವಾಗತಿಸಿದೆ.
ಇದೇ ಮಾದರಿಯಲ್ಲಿ ದೇಶದ ಬೆನ್ನೆಲುಬಾಗಿರುವ ರೈತರನ್ನು ಗೌರವಿಸುವ ಉದ್ದೇಶದಿಂದ, ಅವರ ಹೆಸರಿನ ಮುಂದೆಯೂ ‘Fr’ (Farmer) ಎಂಬ ಅಂಕಿತನಾಮವನ್ನು ಸೇರಿಸಬೇಕು ಎಂದು ಟ್ರಸ್ಟ್ನ ಟ್ರಸ್ಟಿ ಕಲ್ಲೂರು ಮೇಘರಾಜ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಿಪ್ಪನ್ಪೇಟೆಯ ಸ್ಥಳೀಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತ ಮಹಿಳೆಯರು ಹಾಗೂ ಪುರುಷರ ಭೂದಾಖಲೆಗಳು, ಆರ್ಟಿಸಿ (ಪಹಣಿ) ಮತ್ತು ಮ್ಯುಟೇಷನ್ ದಾಖಲೆಗಳಲ್ಲಿ ಅವರ ಹೆಸರಿನೊಂದಿಗೆ ‘Fr’ ಎಂದು ನಮೂದಿಸಬೇಕು ಎಂದು ಆಗ್ರಹಿಸಿದರು.
ರೈತರಿಗೆ ಇಂತಹ ಗೌರವ ನೀಡುವುದರಿಂದ ಅನ್ನದಾತರ ಸ್ಥಾನಮಾನವನ್ನು ಅಧಿಕೃತವಾಗಿ ಗುರುತಿಸಿದಂತಾಗುತ್ತದೆ. ಈ ನಿರ್ಧಾರ ದೇಶಕ್ಕೆ ಮಾದರಿಯಾಗುವಂತಹ ಕ್ರಾಂತಿಕಾರಕ ಹೆಜ್ಜೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರಿ ನೌಕರರ ಶನಿವಾರದ ರಜೆ ರದ್ದುಪಡಿಸಲು ಆಗ್ರಹ
ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ಪ್ರಸ್ತುತ ನೀಡಲಾಗುತ್ತಿರುವ 2ನೇ ಹಾಗೂ 4ನೇ ಶನಿವಾರದ ರಜೆಗಳನ್ನು ರದ್ದುಪಡಿಸಬೇಕು ಎಂದು ಕಲ್ಲೂರು ಮೇಘರಾಜ್ ಆಗ್ರಹಿಸಿದರು.
ಸಾರ್ವಜನಿಕರು ಹಾಗೂ ರೈತರು ರಜಾ ದಿನಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಮಾಡುವ ಮೊಬೈಲ್ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸುವಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯ ಬಳಿಕ ಹೋಬಳಿ ಕೇಂದ್ರಕ್ಕೆ ತೆರಳಿದ ಅವರು, ಮೇಲ್ಕಂಡ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಆರ್.ಎ. ಚಾಬುಸಾಬ್, ಹೆಚ್.ಎಂ. ಸಂಗಯ್ಯ, ಡಿ.ಎಸ್.ಎಸ್ ಅಧ್ಯಕ್ಷ ಸೋಮೇಶ್ವರ ಹಾಗೂ ಮುಡುಬ ಧರ್ಮಪ್ಪ ಉಪಸ್ಥಿತರಿದ್ದರು.
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…