ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ
Retired government employees were specially honoured by senior citizens at Spandana Old Age Home in Guddadachannapur village of Shiggaon taluk, Haveri district.
ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿರುವ ಸ್ಪಂದನಾ ವೃದ್ಧಾಶ್ರಮದಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಹಿರಿಯ ನಾಗರಿಕರಿಂದ ವಿಶೇಷವಾಗಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪಿಎಸ್ಐ ಆಗಿ ನಿವೃತ್ತರಾದ ಪರಶುರಾಮ ನಿರೋಳ್ಳಿ ಮಾತನಾಡಿ, ಅಧಿಕಾರವು ಸಮಾಜದಲ್ಲಿನ ಓರೆ-ಕೋರೆಗಳನ್ನು ತಿದ್ದುವ ಜವಾಬ್ದಾರಿಯುತ ಸಾಧನವಾಗಿದೆ. ಯುವಕರು ದುಶ್ಚಟಗಳಿಗೆ ಒಳಗಾಗದೆ ನ್ಯಾಯಯುತವಾಗಿ ಸಮಾಜಸೇವೆ ಮಾಡಬೇಕು. ಸಮಾಜದಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ತೊಂದರೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಪ್ರೌಢಶಾಲಾ ಶಿಕ್ಷಕರಾಗಿ ನಿವೃತ್ತರಾದ ಆರ್.ಎಚ್. ರೊಡ್ಡಣ್ಣವರ ಹಾಗೂ ಪೌರಕಾರ್ಮಿಕರಾಗಿ ನಿವೃತ್ತರಾದ ನಿಂಗಪ್ಪ ಹೊಸಮನಿ ಅವರು ಕೂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಸನ್ಮಾನ ಕಾರ್ಯಕ್ರಮದಲ್ಲಿ ಸ್ಪಂದನಾ ವೃದ್ಧಾಶ್ರಮದ ಅಧ್ಯಕ್ಷ ಮಹಾಬಲೇಶ ಹೋನಕೇರಿ, ಹೊನ್ನಪ್ಪ ಹೂಗಾರ, ಹಾವೇರಿ ಜಿಲ್ಲಾ ಇಂಟೆಲಿಜೆನ್ಸ್ ವಿಭಾಗದ ಪಿಎಸ್ಐ ಡಿ.ಎನ್. ಕುಡಲ್, ಸೋಮಶೇಖರ ಗೌರಿಮಠ, ಷಣ್ಮುಕಪ್ಪ ಕಲಣ್ಣವರ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಚಂದ್ರು ಮಾಯಣ್ಣವರ, ಶಿವಾನಂದ ಗುಡ್ಡನವರ, ಅಶೋಕ್ ಶೆಟ್ಟರ್ ಹಾಗೂ ಮದು ಜಂಗಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿರಿಯ ನಾಗರಿಕರು ನಿವೃತ್ತ ಸರ್ಕಾರಿ ನೌಕರರನ್ನು ಸನ್ಮಾನಿಸಿ ಗೌರವಿಸಿದರು.
ವರದಿ: ನಿಂಗರಾಜ್ ಕುಡಲ್, ಹಾವೇರಿ ಜಿಲ್ಲೆ – ಬಂಕಾಪುರ
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…