ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು
Ripponpete’s Niyaz Nasir wins first place in the under-75 kg Karate category at the Shivamogga Dasara Sports Meet, adding another achievement to his national and international martial arts journey.
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ರಿಪ್ಪನ್ಪೇಟೆಯ ಯುವ ಕ್ರೀಡಾಪಟು ನಿಯಾಜ್ ನಾಸಿರ್ ಗಮನಾರ್ಹ ಸಾಧನೆ ಮಾಡಿದ್ದಾರೆ.
75 ಕೆ.ಜಿ. ಒಳಗಿನ ಕರಾಟೆ ವಿಭಾಗದಲ್ಲಿ ಸ್ಪರ್ಧಿಸಿದ್ದ ನಿಯಾಜ್ ನಾಸಿರ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ. ಶಿವಮೊಗ್ಗ ದಸರಾ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿರುವುದು ಅವರ ಕ್ರೀಡಾ ಪಯಣಕ್ಕೆ ಮತ್ತಷ್ಟು ಉತ್ತೇಜನ ನೀಡಿದೆ.
ರಿಪ್ಪನ್ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿಗಳಾದ ನಾಸಿರ್ ಹಾಗೂ ಜೀನತ್ ದಂಪತಿಯ ಪುತ್ರನಾಗಿರುವ ನಿಯಾಜ್, ಸತತ ಪರಿಶ್ರಮ ಹಾಗೂ ಕಠಿಣ ತರಬೇತಿಯ ಮೂಲಕ ಕರಾಟೆಯಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ.
ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ವಿಭಾಗ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದ ನಿಯಾಜ್, ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಅಗ್ರಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.
2025ರ ಜನವರಿಯಲ್ಲಿ ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ನ್ಯಾಷನಲ್ SQAY ಮಾರ್ಷಲ್ ಆರ್ಟ್ಸ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅವರು, ವೈಯಕ್ತಿಕ ‘ಕೌಶಲ್’ ಹಾಗೂ ಗುಂಪು ‘ಕೌಶಲ್’ ವಿಭಾಗಗಳಲ್ಲಿ ತಲಾ ಒಂದು ಬೆಳ್ಳಿ ಪದಕ ಸೇರಿದಂತೆ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು.
ನಿಯಾಜ್ ನಾಸಿರ್ ಅವರ ಕ್ರೀಡಾ ಸಾಧನೆಯ ಮತ್ತೊಂದು ಹೆಗ್ಗುರುತಾಗಿ ಕಳೆದ ವರ್ಷ ಥೈಲ್ಯಾಂಡ್ನಲ್ಲಿ ನಡೆದ ಅಂತರಾಷ್ಟ್ರೀಯ SQAY ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.ಈವರೆಗೆ ರಾಷ್ಟ್ರಮಟ್ಟದಲ್ಲಿ 6 ಚಿನ್ನದ ಪದಕಗಳು ಹಾಗೂ ರಾಜ್ಯಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ಗೆದ್ದಿರುವ ನಿಯಾಜ್, ಕರಾಟೆ ಹಾಗೂ ಮಾರ್ಷಲ್ ಆರ್ಟ್ಸ್ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.
ನಿಯಾಜ್ ಅವರು ಗ್ರ್ಯಾಂಡ್ ಮಾಸ್ಟರ್ ಡಾ. ಶ್ಯಾನ್ ಮುಹೀಬ್ ಎ.ಜೆ. ಅವರ ಮಾರ್ಗದರ್ಶನದಲ್ಲಿ ಹಾಗೂ ತರಬೇತುದಾರರಾದ ನವೀನ್ ಸೆನ್ ಮತ್ತು ಮಂಜು ಸೆನ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ.
ತಮ್ಮ ಸಾಧನೆಗೆ ಮಾರ್ಗದರ್ಶನ ನೀಡಿದ ತರಬೇತುದಾರರು, ಎನ್.ಆರ್.ಎಸ್. ಕೋಣಂದೂರು ಶಾಲೆಯ ನಿವೃತ್ತ ಪ್ರಾಂಶುಪಾಲ ದಿವಂಗತ ಗಣೇಶ್ ಮೂರ್ತಿ ಹಾಗೂ ಶಿಕ್ಷಕ ವೃಂದಕ್ಕೆ ನಿಯಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.
ಶಿವಮೊಗ್ಗ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಮ್ಮೆ ತಮ್ಮ ಪ್ರತಿಭೆ ಮೆರೆದಿರುವ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ ಅವರಿಗೆ ಮುಂದಿನ ಕ್ರೀಡಾ ಪಯಣಕ್ಕೆ ಪೋಸ್ಟ್ಮ್ಯಾನ್ ನ್ಯೂಸ್ ಬಳಗದ ವತಿಯಿಂದ ಹಾರ್ದಿಕ ಅಭಿನಂದನೆಗಳು.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…