ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ
KSRP Police Constable written exam was successfully conducted in Shivamogga and Bhadravati. A total of 12,858 candidates appeared for RPC NKK and RPC KK exams amid various challenges
ಶಿವಮೊಗ್ಗ: ಸೆಪ್ಟೆಂಬರ್ 20ರಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಕೆಎಸ್ಆರ್ಪಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ದೂರದ ಊರುಗಳಿಂದ ಆಗಮಿಸಿದ ಅಭ್ಯರ್ಥಿಗಳು ಹಲವು ಸವಾಲುಗಳ ನಡುವೆಯೂ ಪರೀಕ್ಷೆಗೆ ಹಾಜರಾಗಿದ್ದಾರೆ. ವಸತಿ ಸೌಲಭ್ಯ ಸಿಗದ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳು ಬಸ್ ನಿಲ್ದಾಣದಲ್ಲೇ ಮಲಗಿ ವಿಶ್ರಾಂತಿ ಪಡೆದು ಪರೀಕ್ಷೆ ಬರೆದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿವೆ.
ಶಿವಮೊಗ್ಗ ಮತ್ತು ಭದ್ರಾವತಿ ನಗರಗಳ ಒಟ್ಟು 34 ಶಾಲಾ-ಕಾಲೇಜುಗಳಲ್ಲಿ RPC NKK ವೃಂದದ ಕೆಎಸ್ಆರ್ಪಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆ ಆಯೋಜಿಸಲಾಗಿತ್ತು. ಇದೇ ವೇಳೆ RPC KK ವೃಂದದ ಲಿಖಿತ ಪರೀಕ್ಷೆಯನ್ನು 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು.
ಶಿವಮೊಗ್ಗ ಜಿಲ್ಲೆಯಲ್ಲಿ RPC NKK ವೃಂದಕ್ಕೆ ಒಟ್ಟು 11,712 ಅಭ್ಯರ್ಥಿಗಳು ಪರೀಕ್ಷೆಗೆ ನಿಗದಿಯಾಗಿದ್ದು, ಅವರಲ್ಲಿ 9,380 ಮಂದಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. RPC KK ವೃಂದದಲ್ಲಿ 4,118 ಅಭ್ಯರ್ಥಿಗಳು ನಿಗದಿಯಾಗಿದ್ದು, 3,478 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. ಎರಡೂ ವೃಂದಗಳನ್ನು ಸೇರಿಸಿ ಒಟ್ಟು 12,858 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಗಡಿಯಾರ, ಜಾಮರ್, ಗಾಳಿ-ಬೆಳಕು, ಕುಡಿಯುವ ನೀರು, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿತ್ತು. ಪರೀಕ್ಷೆಯ ಪಾರದರ್ಶಕತೆ ಮತ್ತು ಭದ್ರತೆಗಾಗಿ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಶಿವಮೊಗ್ಗ ಜಿಲ್ಲೆಯಲ್ಲಿ ಲಿಖಿತ ಪರೀಕ್ಷೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ. ಪರೀಕ್ಷೆಯ ಯಶಸ್ಸಿಗೆ ಸಹಕರಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರಿಗೆ ಪೊಲೀಸ್ ಇಲಾಖೆ ಧನ್ಯವಾದ ಸಲ್ಲಿಸಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದೆ.
ಇದರ ನಡುವೆ, ಉದ್ಯೋಗದ ಕನಸನ್ನು ಹೊತ್ತು ದೂರದ ಊರುಗಳಿಂದ ಶಿವಮೊಗ್ಗಕ್ಕೆ ಆಗಮಿಸಿದ ಕೆಲ ಅಭ್ಯರ್ಥಿಗಳು ವಸತಿ ಸಮಸ್ಯೆಯಿಂದ ಬಸ್ ನಿಲ್ದಾಣದಲ್ಲೇ ರಾತ್ರಿ ವಿಶ್ರಾಂತಿ ಪಡೆದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸರ್ಕಾರಿ ಉದ್ಯೋಗ ಪಡೆಯುವ ನಿರೀಕ್ಷೆಯಲ್ಲಿ ಅಭ್ಯರ್ಥಿಗಳು ಅನುಭವಿಸಿದ ಪ್ರಯಾಸಕ್ಕೆ ಈ ದೃಶ್ಯಗಳು ಸಾಕ್ಷಿಯಾಗಿವೆ.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…