ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ
Youth Congress and NSUI workers in Shivamogga observed Prime Minister Narendra Modi’s birthday as ‘Unemployment Day’ and staged a protest over employment and youth-related issues.
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಹಾಗೂ NSUI ಕಾರ್ಯಕರ್ತರು ‘ನಿರುದ್ಯೋಗಿಗಳ ದಿನ’ ಆಚರಿಸಿ ಪ್ರತಿಭಟನೆ ನಡೆಸಿದರು. ನಗರದ ಖಾಸಗಿ ಬಸ್ ನಿಲ್ದಾಣದ ಎದುರು ಕಪ್ಪು ಧಿರಿಸು ಧರಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ಉದ್ಯೋಗ ನೀತಿ ಹಾಗೂ ಯುವಕರಿಗೆ ಉದ್ಯೋಗ ಕಲ್ಪಿಸುವ ವಿಚಾರವಾಗಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೇಶ್, 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿಸುವ ಕುರಿತು ನೀಡಲಾಗಿದ್ದ ಭರವಸೆಗಳನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಮುಂದುವರಿದಿದೆ ಎಂದು ಅವರು ಆರೋಪಿಸಿದರು. ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ಜನರು ಎಟಿಎಂಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಬಳಿಕ ಯುವಕರು ಉದ್ಯೋಗದ ಬಗ್ಗೆ ಪ್ರಶ್ನಿಸಿದಾಗ ‘ಬ್ರೀಥ್ ಇನ್, ಬ್ರೀಥ್ ಔಟ್’ ಎಂದು ಯೋಗ ಮಾಡುವಂತೆ ಹೇಳಲಾಯಿತು ಎಂದು ವ್ಯಂಗ್ಯವಾಡಿದರು. ಉದ್ಯೋಗದ ಬದಲಿಗೆ ಪಕೋಡಾ ಮಾರಾಟದ ಕುರಿತು ಮಾತನಾಡಲಾಯಿತು ಎಂದು ಟೀಕಿಸಿದರು.
ದೇಶದ ಯುವಕರು ಪದವಿ ಪಡೆದು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಪೋಷಕರು ಮಾಡಿರುವ ಖರ್ಚು ಸಾರ್ಥಕವಾಗಬೇಕು ಎಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ಪದವಿ ಪಡೆದ ನಂತರವೂ ಉದ್ಯೋಗ ದೊರೆಯದ ಪರಿಸ್ಥಿತಿ ಇದೆ ಎಂದು ಯೋಗೇಶ್ ಹೇಳಿದರು.
ಯುವಕರನ್ನು ಧರ್ಮ, ಜಾತಿ ಹಾಗೂ ರಾಜ್ಯಗಳ ಹೆಸರಿನಲ್ಲಿ ವಿಭಜಿಸುವ ಬದಲು ಉದ್ಯೋಗ ಸೃಷ್ಟಿ, ರೈತರ ಸಮಸ್ಯೆಗಳು ಹಾಗೂ ಮಹಿಳೆಯರ ಸುರಕ್ಷತೆಯಂತಹ ಮೂಲಭೂತ ವಿಚಾರಗಳಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಆಗ್ರಹಿಸಿದರು.
‘ಬೇಟಿ ಬಚಾವೋ, ಬೇಟಿ ಪಡಾವೋ’ ಘೋಷಣೆ ನೀಡಲಾಗಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರ ಉತ್ತರಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳನ್ನು ಉಲ್ಲೇಖಿಸಿದ ಅವರು, ಮನೆ, ಮಕ್ಕಳ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಗೆ ಉದ್ಯೋಗ ಮತ್ತು ಆರ್ಥಿಕ ಪ್ರಗತಿ ದೊರೆತಾಗ ಮಾತ್ರ ಸಂಭ್ರಮಾಚರಣೆ ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.
ಭಾಷಣದ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವ್ಯಂಗ್ಯವಾಗಿ ಶುಭಾಶಯ ಕೋರಿದ ಯೋಗೇಶ್, “ಹ್ಯಾಪಿ ಬರ್ತ್ ಡೇ ಟು ಯೂ… ವೇರ್ ಈಸ್ ಮೈ ಜಾಬ್? ವೇರ್ ಈಸ್ ಮೈ ಎಜುಕೇಶನ್? ವೇರ್ ಈಸ್ ಮೈ ಸೇಫ್ಟಿ? ವೇರ್ ಈಸ್ ಮೈ ಜಾಬ್?” ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ NSUI ಕಾರ್ಯಕರ್ತರು ಕಪ್ಪು ಧಿರಿಸು ಧರಿಸಿ ಭಾಗವಹಿಸಿ, ‘ನಿರುದ್ಯೋಗಿಗಳ ದಿನ’ ಎಂದು ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ನ ಹರ್ಷಿತ್ ಗೌಡ, ಮಧು, ದೇವೇಂದ್ರಪ್ಪ, ಉತ್ತರ ಬ್ಲಾಕ್ನ ಶಿವುಕುಮಾರ್, ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷ, ಎನ್. ರಮೇಶ್, ಬಾಲಾಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…