ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

An unidentified man’s partially decomposed body was found near the Sharavathi backwaters at Nelagale village in Hosanagara. Police have appealed to the public for help in identifying him.

ಹೊಸನಗರ: ತಾಲೂಕಿನ ನೆಲಗಳಲೆ ಗ್ರಾಮದ ಶರಾವತಿ ಹಿನ್ನೀರಿನ ದಡದಲ್ಲಿ ಸುಮಾರು 30 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮೃತದೇಹವು ಭಾಗಶಃ ಕೊಳೆತ ಸ್ಥಿತಿಯಲ್ಲಿದ್ದು, ಸುಮಾರು 7 ರಿಂದ 8 ದಿನಗಳ ಹಿಂದೆ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಮೃತ ವ್ಯಕ್ತಿಯು ತಿಳಿ ನೀಲಿ ಬಣ್ಣದ ಶರ್ಟ್, ನೀಲಿ ಜೀನ್ಸ್ ಪ್ಯಾಂಟ್ ಹಾಗೂ ಕಂದು ಬಣ್ಣದ ಬೆಲ್ಟ್ ಧರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಅಥವಾ ಅವರ ಕುಟುಂಬಸ್ಥರ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಕೆಳಗಿನ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ:

ಪೊಲೀಸ್ ಅಧೀಕ್ಷಕರು, ಶಿವಮೊಗ್ಗ: 08182-261400

ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪವಿಭಾಗ: 08181-220388

ವೃತ್ತ ನಿರೀಕ್ಷಕರು, ಹೊಸನಗರ ವೃತ್ತ ಕಚೇರಿ: 9480803337

ಪಿಎಸ್‌ಐ, ಹೊಸನಗರ ಪೊಲೀಸ್ ಠಾಣೆ: 9480803364

About The Author