Headlines

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ | Crime News

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ…

Read More

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…

Read More

Shivamogga | ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು

ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು ಶಿವಮೊಗ್ಗ: ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ. ಭಾನುವಾರವಾಗಿದ್ದರಿಂದ ಆಟವಾಡಲು ಪಾರ್ಕ್‌ಗೆ ಪೋಷಕರ ಜತೆ ಮಗು ತೆರಳಿತ್ತು. ಸಿಮೆಂಟ್‌ ಜಿಂಕೆ ಮೇಲೆ ಕುಳಿತಿದ್ದಾಗ, ಅದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಗು ಮೃತಪಟ್ಟಿದೆ.  ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹರತಾಳು ಹಾಲಪ್ಪರವರಿಗೆ ಕಮಿಷನ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧ: ಬೇಳೂರು ಗೋಪಾಲಕೃಷ್ಣ

ಹೊಸನಗರ: ಹೊಸನಗರ-ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ  ಬೇಳೂರು ಗೋಪಾಲಕೃಷ್ಣರವರು ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಅವರು ತಾವು ಪ್ರಾಮಾಣಿಕರು ಮರಳು ಮಾಧ್ಯಮದವರಿಂದ…

Read More

ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet

ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…

Read More

ಉಡ ಬೇಟೆ – ನಾಡ ಬಂದೂಕು ಸಹಿತ ಇಬ್ಬರ ಬಂಧನ | Bengal monitor

ಉಡ ಬೇಟೆ – ನಾಡ ಬಂದೂಕು ಸಹಿತ ಇಬ್ಬರ ಬಂಧನ | Bengal monitor ಉಡ (Bengal monitor) ಬೇಟೆಯಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನ ಅಂಬ್ಲಿಗೋಳ ಅರಣ್ಯ ಇಲಾಖೆಯವರು ಬಂಧಿಸಲಾಗಿದೆ. ಆರೋಪಿಗಳಿಂದ ಅಕ್ರಮ ಕಂಟ್ರಿ ಮೇಡ್ ರೈಫಲ್, ಬೇಟೆಯಾಡಿದ 3.220 ಕೆಜಿ ಉಡದ ಮೃತದೇಹ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳಾದ  ಶಿಕಾರಿಪುರ ತಾಲೂಕಿನ ಮಂಜಪ್ಪ(60), ಈಶ್ವರಪ್ಪ (38) ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಂಬ್ಲಿಗೊಳ ವಲಯ ವ್ಯಾಪ್ತಿ ಒಳಗೊಂಡ ಡಿಎಫ್‌ಒ ಸಂತೋಷ್‌ ಕುಮಾರ್‌, ಎಸಿಎಫ್‌…

Read More

SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ 26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ 27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ 28 -02-2024 : ತೃತೀಯ ಭಾಷೆ-…

Read More

Thirthahalli | ಸಾಲ ಬಾಧೆ ತಾಳಲಾರದೆ ಹೊಟೇಲ್ ಮಾಲೀಕ ಆತ್ಮಹತ್ಯೆ

 ಹೋಟೆಲ್ ಮಾಲೀಕ ನೇಣಿಗೆ ಶರಣು ! ತೀರ್ಥಹಳ್ಳಿ: ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ. ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ʻಚಂದ್ರಯಾನ-3ʼ ನೌಕೆ : ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ

ಭಾರತೀಯರ ಹೆಮ್ಮೆಯ ಪ್ರತೀಕವಾದ ಬಹು‌ನಿರೀಕ್ಷಿತ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ. ಇಂದು ಮಧ್ಯಾಹ್ನ 2.35ಕ್ಕೆ ಸರಿಯಾಗಿ ಚಂದ್ರಯಾನ ಉಡಾವಣೆ ಮಾಡಲಾಯಿತು. ಉಡಾವಣೆ ಯಶಸ್ವಿಯಾಗುತ್ತಲೇ ಇಸ್ರೋ ವಿಜ್ಞಾನಿಗಳು ಹಾಗೂ ನೆರೆದಿದ್ದ ಸಾವಿರಾರು ಮಂದಿಯಿಂದ ಸಂಭ್ರಮದ ಹರ್ಷೋದ್ಘಾರ, ಭರ್ಜರಿ ಕರತಾಡನ ಕೇಳಿಬಂದಿದೆ‌. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡಾವಣೆ ಮಾಡಲಾಯಿತು. ಯಶಸ್ವಿ ಲ್ಯಾಂಡಿಂಗ್ ಆದರೆ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ. ಚಂದ್ರಯಾನ-3ನ್ನು 615 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಲ್ಯಾಂಡರ್…

Read More