Headlines

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹರತಾಳು ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷೆ ಸೇರಿದಂತೆ 7 ಜನ ಸದಸ್ಯರು ಕೆಡಿಪಿ ಸಭೆಗೆ ಗೈರು :

ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು. 8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು  ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ  67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು  ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…

Read More

ರಿಪ್ಪನ್ ಪೇಟೆ :ಭೀಕರ ಅಪಘಾತ , ಮರಕ್ಕೆ ಗುದ್ದಿದ ಮರಳು ತುಂಬಿದ್ದ ಟಿಪ್ಪರ್

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಟಿಪ್ಪರ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಜೆಸಿಬಿ ಯಂತ್ರದ ಮೂಲಕ ಹೊರತೆಗೆಲಾಯಿತು. ಚಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.ಚಾಲಕ ಹೊಸನಗರ…

Read More

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪಟ್ಟಣದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗ, ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಇಲ್ಲಿ ದಿನಾಂಕ 20.03.2025ರಂದು ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಜಾನಪದ ಸಮೂಹ ನೃತ್ಯ, ಜಾನಪದ ಸಮೂಹ ಗಾಯನ,…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಾವು ಆಣೆ ಮಾಡಬೇಕು ಹಣವನ್ನು ಪಡೆದಿಲ್ಲವೆಂದು ಎಂದು ಸವಾಲು ಎಸೆದಿದ್ದರು. ಇದರ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಹರತಾಳು ಹಾಲಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ನಾವು ಯಾವುದೇ  ಮರಳು ಲಾರಿ ಮಾಲೀಕರಿಂದ ಕಮೀಷನ್ ಹಾಗೂ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿದ್ದಾರೆ. ಬೇಳೂರು ಮಾಡಿರುವ ಆರೋಪಗಳು…

Read More

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ ಪಾಕ್ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಿದ ಸೈನಿಕರಿಗೆ ಕೃತಜ್ಞತೆ ತಿಳಿಸುವ ವಿಜಯ ತಿರಂಗಾ ಯಾತ್ರೆಯನ್ನು ಮಳೆಯಲ್ಲೂ ಯಶಸ್ವಿಯಾಗಿ ನಡೆಸಲಾಯಿತು. ಶಿವಮೊಗ್ಗದ ನಾಗರಿಕರ ವೇದಿಕೆ ಈ ಯಾತ್ರೆ ಆಯೋಜಿಸಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಗಾಂಧಿ ಬಜಾರ್ ಮೂಲಕ, ಶಿವಪ್ಪ ನಾಯಕ ವೃತ್ತದಿಂದ ಟಿ.ಸೀನಪ್ಪ‌ ಶೆಟ್ಟಿ ವೃತ್ತದ ವರೆಗೂ ವಿಜಯ ತಿರಂಗಾ ಯಾತ್ರೆ ನಡೆಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಪ್ರಾರಂಭವಾದ ತಿರಂಗಾ ಯಾತ್ರೆಯಲ್ಲಿ ಸುಮಾರು 700 ಮೀಟರ್…

Read More

ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ…

Read More

Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ

Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ ಶಿವಮೊಗ್ಗದಲ್ಲಿ ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದ ರಸ್ತೆಯೊಂದರಲ್ಲಿ ಚರಂಡಿಗೆ ಹಾಕಲಾಗಿದ್ದ ಸ್ಲ್ಯಾಬ್​ ಕುಸಿದು ಮುತ್ತಪ್ಪ (45)  ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.  ಮೃತ ವ್ಯಕ್ತಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿಯಾಗಿದ್ದಾರೆ. ಗುಜರಿ ವ್ಯಾಪಾರ ಮಾಡುತ್ತಿದ್ದ ಮುತ್ತಪ್ಪ ಮೂತ್ರ ವಿಸರ್ಜಿಸುತ್ತಿದ್ದ ವೇಳೆಯಲ್ಲಿ ದಿಡೀರ್ ಸ್ಲ್ಯಾಬ್​ ಕುಸಿದಿದೆ. ಪರಿಣಾಮ ಅವರು ಚರಂಡಿಗೆ ಬಿದ್ದಿದ್ದಾರೆ.ಸುಮಾರು ಹತ್ತು ಅಡಿ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು|accident

ತೀರ್ಥಹಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ಮತ್ತು ಕೊಪ್ಪ ಮಾರ್ಗದ ದೇವಂಗಿ ವಾಟಿಗಾರು ಬಳಿ ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಎರಡು ಕಾರಿನಲ್ಲಿದ್ದ ತಲಾ ಮೂವರು ಗಂಭೀರ ಗಾಯಗೊಂಡಿದ್ದರು.  ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ  ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು…

Read More