POSTMANNEWS

ನೈಜ ಸುದ್ದಿ ನೇರ ಬಿತ್ತರ..

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು

Driver loses control, car overturns into lake: Two dead

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು, ಇಬ್ಬರು ಪಾರು

At around 3.20 in the morning, four people were travelling in an Eco car when the driver lost control near the Kanekoppa-Hosur road junction and the car overturned into a roadside lake.


ಸೊರಬ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಕೆರೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ದುರ್ಘಟನೆ ಸೊರಬ ತಾಲೂಕಿನ ಆನವಟ್ಟಿ ಸಮೀಪದ ಕನೆಕೊಪ್ಪ ಹೊಸೂರು ಬಳಿ ಡಿಸೆಂಬರ್ 24ರ ಮುಂಜಾನೆ ನಡೆದಿದೆ.


ಶಿಕಾರಿಪುರ ತಾಲೂಕಿನ ಪುನೇದಹಳ್ಳಿ ನಿವಾಸಿಗಳಾದ ನವೀನ್ (21) ಮತ್ತು ರಾಮಚಂದ್ರ (37) ಮೃತಪಟ್ಟವರು. ಕಾರು ಕೆರೆಗೆ ಬಿದ್ದ ಕೂಡಲೇ ರಾಮಚಂದ್ರ ನೀರುಪಾಲಾಗಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ರುದ್ರೇಶ್ (26) ಹಾಗೂ ಮಂಜುನಾಥ್ (21) ಎಂಬ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಬೆಳಗಿನ ಜಾವ ಸುಮಾರು 3.20ರ ವೇಳೆಗೆ ಶಿಕಾರಿಪುರದಿಂದ ಆನವಟ್ಟಿ ಕಡೆಗೆ ಇಕೋ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದ ವೇಳೆ, ಕನೆಕೊಪ್ಪ ಹೊಸೂರು ರಸ್ತೆ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಕೆರೆಗೆ ಪಲ್ಟಿಯಾಗಿದೆ.


ಘಟನಾ ಸ್ಥಳಕ್ಕೆ ಆನವಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಾಗಿದೆ.

About The Author