Headlines

Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ
ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಕ್ವಾಡ್ರಿಗೆ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಒಣಗಿಸಿಟ್ಟ 3 ಕ್ವಿಂಟಾಲ್ ಗೂ ಹೆಚ್ಚು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದೆ.

ಕ್ವಾಡ್ರಿಗೆ ಗ್ರಾಮದ ಬಾಲರಾಜ್ ಎಂಬುವವರ ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಮೂರು ಕ್ವಿಂಟಾಲ್ ಗೂ ಹೆಚ್ಚೂ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಗುರುವಾರ ನಡೆದಿದೆ.

ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *