ರಿಪ್ಪನ್ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು.
ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.
[ರಿಪ್ಪನ್ಪೇಟೆಯ ಸಮೀಪದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಮಠದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮೀಜಿ ಗೋ ಮಾತೆಯನ್ನು ಪೂಜಿಸಿ ಬಾಳೆಹಣ್ಣು ಅಕ್ಕಿ ಬೆಲ್ಲವನ್ನು ನೀಡುತ್ತಿರುವುದು.]
[ ರಿಪ್ಪನ್ಪೇಟೆಯ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ನಾಗರತ್ನಮ್ಮ ,ಸಿದ್ದಪ್ಪ ಮತ್ತು ಮಕ್ಕಳು ಗೋಪೂಜೆಯನ್ನು ಸಾಮೂಹಿಕವಾಗಿ ಆಚರಿಸಿದರು.]
[ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಕುಟುಂಬದವರು ಗೋಪೂಜೆಯನ್ನು ನೆರವೇರಿಸಿದರು.]
[ಹೊಸನಗರ ತಾಪಂ ಮಾಜಿ ಸದಸ್ಯರಾದ ಬಿ ಜಿ ಚಂದ್ರಮೌಳಿ ಕುಟುಂಬಸ್ಥರು ಗೋಪೂಜೆ ನೆರವೇರಿಸಿದರು.]
ರಿಪ್ಪನ್ ಪೇಟೆ ಗ್ರಾಪಂ ಮಾಜಿ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕುಟುಂಬದವರು ಗೋಪೂಜೆ ನೆರವೇರಿಸಿದರು.
[ಕುಕ್ಕಳಲೆಯ ಕೀರ್ತಿ ಗೌಡ ರವರ ಕುಟುಂಬಸ್ಥರು ಗೋಪೂಜೆ ನೆರವೇರಿಸಿದರು]
ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿ ನಿವಾಸಿ ಶಶಿಕಲಾ ಬಸವರಾಜ್ ಮನೆಯವರು ಗೋಪೂಜೆ ಮಾಡಿ ಹಣ್ಣು ನೀಡುತ್ತಿರುವುದು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್