An elderly couple was found dead under suspicious circumstances in Bhadravati, Karnataka. Gold ornaments were reported missing. Police have launched an intensive investigation.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ತರಿಕೆರೆ ರಸ್ತೆಯ ಸೀರಾಕ್ ಹೋಟೆಲ್ ಹಿಂಭಾಗದ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತರ ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಇನ್ನಷ್ಟು ಗಂಭೀರತೆ ತಂದಿದೆ.
ಮೃತರನ್ನು ವಿಐಎಸ್ಎಲ್ ನಿವೃತ್ತ ನೌಕರ ವೇಗ ನಡಿಗೆಯ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ (75) ಎಂದು ಗುರುತಿಸಲಾಗಿದೆ. ಜಯಮ್ಮ ಅವರ ಕತ್ತಿನಲ್ಲಿದ್ದ ಬಂಗಾರದ ಚೈನ್ ಸೇರಿದಂತೆ ಮನೆಯಲ್ಲಿದ್ದ ಇತರೆ ಒಡವೆಗಳು ಕಾಣೆಯಾಗಿವೆ. ಆದರೆ ದಂಪತಿಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲವೆಂದು ಅವರ ಮಕ್ಕಳು ತಿಳಿಸಿದ್ದಾರೆ.
ಚಂದ್ರಪ್ಪ–ಜಯಮ್ಮ ದಂಪತಿ ಪ್ರತಿದಿನ ಬೆಳಗಿನ ಜಾವ ವಾಯುವಿಹಾರಕ್ಕೆ ಹೋಗುವ ಅಭ್ಯಾಸ ಹೊಂದಿದ್ದರು. ಇವರಿಗೆ ಶಿವಮೊಗ್ಗದ ಚೀಲೂರು ಎನ್ಇಎಸ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಆದರ್ಶ್, ನಗರದ ಸಿದ್ದಾಪುರ–ಹೊಸೂರು ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ರವಿಕುಮಾರ್ ಹಾಗೂ ದಾವಣಗೆರೆ ಶುಗರ್ಸ್ನಲ್ಲಿ ಲೆಕ್ಕಾಧಿಕಾರಿಯಾಗಿರುವ ವಿಶ್ವನಾಥ್ ಎಂಬ ಮೂರು ಮಕ್ಕಳು ಇದ್ದಾರೆ.
ಕಳೆದ ಶನಿವಾರ ಆದರ್ಶ್ ಹಾಗೂ ಕುಟುಂಬಸ್ಥರು ಮನೆಗೆ ಬಂದು ಹೋಗಿದ್ದರು. ಸೋಮವಾರ ದಂಪತಿ ಹೊಸದಾಗಿ ಚಿನ್ನಾಭರಣ ಖರೀದಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಮಾಹಿತಿ ಪಡೆದ ತಕ್ಷಣ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕಾರ್ಯಪ್ಪ, ಡಿವೈಎಸ್ಪಿ ಪ್ರಕಾಶ್ ರಾಥೋಡ್, ಸರ್ಕಲ್ ಇನ್ಸ್ಪೆಕ್ಟರ್ ಚಿದಾನಂದ್, ಹಳೇನಗರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಸುನಿಲ್ ತೇಲಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ದಾವಣಗೆರೆಯಿಂದ ಆಗಮಿಸಿದ ವಿಶೇಷ ತಂಡಗಳು ಸ್ಥಳ ಪರಿಶೀಲನೆ ನಡೆಸಿವೆ.
ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೃದ್ಧ ದಂಪತಿಯ ಸಾವಿನ ಕಾರಣ ಹಾಗೂ ಚಿನ್ನಾಭರಣ ನಾಪತ್ತೆಯ ಹಿಂದಿನ ರಹಸ್ಯ ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…