ಗ್ರಾಮಸ್ಥರೊಂದಿಗೆ ವಾಗ್ವಾದ, ಅವಾಚ್ಯ ನಿಂದನೆ: ಪಂಚಾಯಿತಿ ಸದಸ್ಯನ ವಿರುದ್ಧ ಗಂಭೀರ ಆರೋಪ

A Gram Panchayat member from Hosanagara taluk in Shivamogga district is accused of publicly abusing a villager over road work issues. The incident video has gone viral on social media, triggering public outrage.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ, ಕಾಂಗ್ರೆಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ರಸ್ತೆ ಕಾಮಗಾರಿ ಸಂಬಂಧ ಗ್ರಾಮಸ್ಥನೊಬ್ಬ ಪ್ರಶ್ನೆ ಕೇಳಿದ್ದಕ್ಕೆ ಆಕ್ರೋಶಗೊಂಡ ಪಂಚಾಯಿತಿ ಸದಸ್ಯ ಧರ್ಮಪ್ಪ, ಸ್ಥಳೀಯ ನಿವಾಸಿ ರಮೇಶ್ ಅವರೊಂದಿಗೆ ವಾಗ್ವಾದಕ್ಕಿಳಿದು, ಸಾರ್ವಜನಿಕರ ಮುಂದೆ ಅವಾಚ್ಯ ಹಾಗೂ ಅಸಭ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಕೋಪದ ಅತಿರೇಕದಲ್ಲಿ ಧರ್ಮಪ್ಪ ಪಾದರಕ್ಷೆಯಿಂದ ಹೊಡೆಯಲು ಮುಂದಾದ ಘಟನೆ ನಡೆದಿದೆ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ. ಜನಪ್ರತಿನಿಧಿಯೇ ಈ ರೀತಿಯ ವರ್ತನೆ ತೋರಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

3 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

4 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

4 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago