A 31-year-old man who left home to visit his farm went missing and was later found dead in the Tunga River in Thirthahalli taluk. Police have registered a case and launched an investigation into the incident.
ತೀರ್ಥಹಳ್ಳಿ:ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಹೊರಟ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.
ಮೃತನನ್ನು ಕುರುವಳ್ಳಿ ಗ್ರಾಮದ ನಿವಾಸಿ ವಸಂತ (31) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ವಸಂತ ಅವರು ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗುವುದಾಗಿ ತಿಳಿಸಿ ಹೊರಟಿದ್ದರು. ಆದರೆ ರಾತ್ರಿ ವರೆಗೆ ಮನೆಗೆ ವಾಪಾಸ್ ಆಗದ ಕಾರಣ ಕುಟುಂಬಸ್ಥರು ಆತಂಕಗೊಂಡಿದ್ದರು. ಶುಕ್ರವಾರ ಬೆಳಗ್ಗೆ ಹುಣಸವಳ್ಳಿ ಸಮೀಪದ ಭೂವರಹ ದೇವಸ್ಥಾನದ ಬಳಿ ನದಿ ತೀರದಲ್ಲಿ ಚಪ್ಪಲಿಗಳು ಕಂಡುಬಂದಿರುವುದನ್ನು ಸ್ಥಳೀಯರು ಗಮನಿಸಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸಿದಾಗ ವಸಂತ ಅವರ ಶವ ಪತ್ತೆಯಾಗಿದೆ.
ಪೊಲೀಸ್ ತನಿಖೆ:
ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.
About The Author
ನಮಸ್ಕಾರ, ನಾನು ರಫಿ ರಿಪ್ಪನ್ಪೇಟೆ.
’ಪೋಸ್ಟ್ಮ್ಯಾನ್ ನ್ಯೂಸ್’ ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. “ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು” ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್.
ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, ‘ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ’. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.”
ಇಲ್ಲಿ ‘ಸುದ್ದಿ’ ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: “ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ.”
ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ.
’ಪೋಸ್ಟ್ಮ್ಯಾನ್ ನ್ಯೂಸ್’ ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ ‘ಸೇತುವೆ’ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ.
ನಮ್ಮ ಅಂತಿಮ ಗುರಿ ಒಂದೇ — “ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು.”
ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ.
ಸ್ನೇಹಪೂರ್ವಕವಾಗಿ,
ರಫಿ ರಿಪ್ಪನ್ಪೇಟೆ
ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್
🌐 [www.postmannewskannada.com]