Headlines

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು
ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ.

ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ ಮತ್ತು ಗ್ರಾಮಸ್ಥರು ಆಟೋ ಸಹಿತ ಶಿವರಾಜ್, ನಾಗರಾಜ್ ಅವರನ್ನು ಗ್ರಾಮಾಂತರ ಠಾಣೆಗೆ ಒಪ್ಪಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *