Headlines

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ|rpet

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ
ರಿಪ್ಪನ್‌ಪೇಟೆ;- ಮಂಡಲ ಪಂಚಾಯಿತಿ ಮಾಜಿ ಉಪ ಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳ ದಾನಿ ಡಿ.ಸಿ ಈಶ್ವರಪ್ಪ (76) ಇಂದು ಬೆಳಗ್ಗೆ ಮನೆಯ ಬಳಿಯಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಇವರ ಪತ್ನಿ ಮೃತಪಟ್ಟಿದ್ದು ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಈಶ್ವರಪ್ಪ ಇಂದು ಬೆಳಗ್ಗೆ ಈ ರೀತಿಯ ಸಾವಿಗೆ ಶರಣಾಗಿದ್ದಾರೆ.

ಮೃತರಿಗೆ ಮೂರುಜನ ಗಂಡು ಮಕ್ಕಳು ಇದ್ದು ಮೃತರ ಅಂತ್ಯಕ್ರಿಯೆ ಬರುವೆ ಗ್ರಾಮದ ದೊಡ್ಡಿನಕೊಪ್ಪದ ಜಮೀನಿನಲ್ಲಿ ವೀರಶೈವ ಜನಾಂಗದವರ ಸಂಪ್ರಾದಾಯದಂತೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದರು.

ಸಂತಾಪ : 

ಮಂಡಲ ಮಾಜಿ ಉಪಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳದಾನಿ ಡಿ.ಸಿ ಈಶ್ವರಪ್ಪನವರ ಆಕಾಲಿಕ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು,ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್,ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್, ಬಂಡಿ ರಾಮಚಂದ್ರ,ಅರ್ ಎ ಚಾಬುಸಾಬ್ ,ಬಿ ಜಿ ನಾಗರಾಜ್ , ಎಂ.ಬಿ.ಲಕ್ಷö್ಮಣಗೌಡರು, ಅಮೀರ್ ಹಂಜಾ,ಬಸವೇಶ್ವರ ವೀರಶೈವ ಸಮಾಜದ ಉಪಾದ್ಯಕ್ಷ ಜಿ.ಎಂ.ದುಂಡರಾಜಪ್ಪಗೌಡ, ಎಂ.ಆರ್.ಶಾಂತವೀರಪ್ಪಗೌಡ,ಆಸೀಫ಼್ ಭಾಷಾ,ಏರಗಿ ಉಮೇಶ್, ಅಶ್ವಿನ್ ,ಸದಾಶಿವ ಶೆಟ್ಟಿ ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. 

Leave a Reply

Your email address will not be published. Required fields are marked *