ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!!
ತೀರ್ಥಹಳ್ಳಿ : ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋಗಿ ನಾಪತ್ತೆಯಾಗಿದ್ದ ಯುವತಿಯು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಯುವತಿಯನ್ನು ಧರ್ಮಸ್ಥಳ ಸಂಘದ ಪ್ರತಿನಿಧಿಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ.
ಜೂನ್ 30 ರಂದು ಯುವತಿ ಕೆಲಸಕ್ಕೆಂದು ಹೋದವಳು ನಾಪತ್ತೆಯಾಗಿದ್ದಳು.
ನಾಲೂರಿನ ಮಣಿ ಎಂಬಾತ ಕೊಲೆ ಮಾಡಿ ಹೊಂಡಕ್ಕೆ ತಳ್ಳಿದ್ದೇನೆ ಎಂದು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.
ಶನಿವಾರ ರಾತ್ರಿ ಆತನನ್ನು ಸ್ಥಳಕ್ಕೆ ಕರೆದೊಯ್ದು ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.