Breaking
15 Jan 2026, Thu

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ ಇರುವುದು ದುರದೃಷ್ಟಕರವಾಗಿದೆ, ನನ್ನ ಕ್ಷೇತ್ರದಲ್ಲಿ ಈ ತರಹದ ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ ನನ್ನ ಗಮನಕ್ಕೆ ತನ್ನಿ ಎಂದರು.


ಇತ್ತೀಚಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಇನ್ನಿತರ ಮಾದ್ಯಮಗಳು ಈ ಬಗ್ಗೆ ಸವಿಸ್ತಾರವಾದ ವರದಿ ಮಾಡಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕಣ್ತೆರೆಸುವ ಮೂಲಕ ಆ ಬಡ ಮಹಿಳೆಯ ಬಾಳಿನಲ್ಲಿ ಬೆಳಕು ತಂದಿದ್ದಾರೆ ಎಂದರು.

ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಮಾತನಾಡಿ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿಷ್ಟೆಯಿಂದ ಮಾಡಬೇಕಾಗಿದೆ,ಇಂತಹ ಬಡ ಮಹಿಳೆಯ ಬಗ್ಗೆ ಸರ್ಕಾರದ ಗಮನಕ್ಕೆ ತಂದ ಮಾದ್ಯಮ ಮಿತ್ರರ ಹೆಚ್ಚಿನ ಕಾಳಜಿಯಿಂದ ಬಡ ಮಹಿಳೆಗೆ ಹೊಸ ಬದುಕು ಕಟ್ಟಿಕೊಳ್ಳುವಂತಾಗಿದೆ ಎಂದರು.

ಆಸರೆ ಸಮಿತಿ ಅಧ್ಯಕ್ಷ ಗ್ರಾಪಂ ಸದಸ್ಯ ಚಿದಂಬರಂ ಮಾತನಾಡಿ ಮಹಿಳೆಗೆ ಸುಸಜ್ಜಿತವಾದ ಮನೆ ನಿರ್ಮಿಸಿಕೊಡಲಾಗುವುದು ಆ ಹಿನ್ನಲೆಯಲ್ಲಿ ಹಲವಾರು ದಾನಿಗಳು ದೇಣಿಗೆ ಕೊಡಲು ಮುಂದೆ ಬಂದಿದ್ದು ಅತೀ ಶೀಘ್ರದಲ್ಲಿ ಮನೆ ನಿರ್ಮಾಣವಾಗಲಿದೆ.ಯಾರಾದರೂ ದಾನಿಗಳು ದೇಣಿಗೆ ನೀಡಲು ಬಯಸಿದ್ದಲ್ಲಿ ಮಾರುತಿಪುರ ಗ್ರಾಪಂ ಕಛೇರಿಯನ್ನು ಸಂಪರ್ಕಿಬಹುದು ಎಂದರು.

ಇದೇ ಸಂಧರ್ಭದಲ್ಲಿ ಆಸರೆ ಸಮಿತಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ವೈಯಕ್ತಿಕವಾಗಿ 50 ಸಾವಿರ ನೆರವು ನೀಡಿದರು.

ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ ಅಧ್ಯಕ್ಷೆ ದೀಪಿಕಾ ಕೆ ಆರ್ ,ತಹಶೀಲ್ದಾರ್ ರಾಕೇಶ್ ಪ್ರಾನ್ಸಿಸ್, ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್ ,ಮುಖಂಡರಾದ ಬಿ ಜಿ ಚಂದ್ರಮೌಳಿ ,ಮಾಸ್ತಿಕಟ್ಟೆ ಸುಬ್ರಹ್ಮಣ್ಯ ,ಗ್ರಾಪಂ ಸದಸ್ಯ ಅವಿನಾಶ್ ಸೇರಿದಂತೆ ಇನ್ನಿತರರಿದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *