ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well.

ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೊರತೆಗೆದಿದ್ದಾರೆ.

ತಾಲ್ಲೂಕಿನ ನಿಂಬೆಗೊಂದಿ ಗ್ರಾಮದ ಯಶೋದಮ್ಮ (48), ಇಬ್ಬರು ಮಕ್ಕಳ ತಾಯಿ, ತೀವ್ರ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ಜುಲೈ 19ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನೋವು ಹೆಚ್ಚಾದ ಕಾರಣ ವೈದ್ಯರು ಸ್ಕ್ಯಾನಿಂಗ್ ನಡೆಸಿದಾಗ ಅವರ ಬಲ ಭಾಗದ ಅಂಡಾಶಯದಲ್ಲಿ ದೊಡ್ಡ ಗಡ್ಡೆ ಇರುವುದು ಪತ್ತೆಯಾಯಿತು.

ಇದಾದ ಬಳಿಕ ಮಂಗಳವಾರ (ಜುಲೈ 21) ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಾ ತಜ್ಞ ಡಾ. ಶ್ರೀನಿವಾಸ್, ಸ್ತ್ರೀರೋಗ ತಜ್ಞ ಡಾ. ಪ್ರಕಾಶ್, ಅರವಳಿಕೆ ತಜ್ಞೆ ಡಾ. ಲೀಲಾವತಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ತಂಡ ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದರು.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮಹಿಳೆಯ ಹೊಟ್ಟೆಯಿಂದ ಸುಮಾರು 8.38 ಕೆಜಿ ತೂಕದ ಗಡ್ಡೆಯನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಪ್ರಸ್ತುತ ರೋಗಿಯ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

45 minutes ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

2 days ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

2 days ago