ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ
Shikaripura MLA B.Y. Vijayendra and MP B.Y. Raghavendra offered Bagina to Ambligola Reservoir after it filled up, bringing joy to farmers in the region.
ಶಿಕಾರಿಪುರ, ಆ.8: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಮತ್ತು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಶನಿವಾರ ರೈತರೊಂದಿಗೆ ಸೇರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಸಂದಿಗ್ಧ ಪರಿಸ್ಥಿತಿಯ ನಡುವೆಯೂ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದರು. ರೈತರ ಹಿತಾಸಕ್ತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಮಹತ್ವವನ್ನು ಅವರು ಒತ್ತಿ ಹೇಳಿದರು.
ಕಾರ್ಯಕ್ರಮದಲ್ಲಿ ಬಿ ವೈ ರಾಘವೇಂದ್ರ , ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತಪ್ಪ, ಕೆ.ಎಸ್. ಗುರುಮೂರ್ತಿ, ರೈತ ಮೋರ್ಚಾ ಅಧ್ಯಕ್ಷ ಸಿದ್ದಲಿಂಗಪ್ಪ ನಿಂಬೇಗೊಂದಿ, ಎಸ್.ಬಿ. ಮಠದ್, ಶೇಖರಪ್ಪ ಅಂಬಾರ್ಕಪ್ಪರ್, ರುದ್ರಮೂರ್ತಿ ಸಾಲೂರು, ರುದ್ರಮುನಿ ಚುರ್ಚಿಗುಂಡಿ, ಚೆನ್ನವೀರಪ್ಪ ಹಾಗೂ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹುಲ್ಮಾರ್ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್