ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ
MLA Gopalakrishna Beluru visited the families of road accident victim Archana Jain and offered condolences and financial assistance.
ಸಾಗರ: ತಾಲೂಕಿನ ನೆಲ್ಲಿಬೀಡು ಸಮೀಪ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಳೂರು ಗ್ರಾಮದ ಯುವತಿ ಅರ್ಚನಾ ಜೈನ್ ಅವರ ಕುಟುಂಬವನ್ನು ಶಾಸಕ ಬಿ. ಗೋಪಾಲಕೃಷ್ಣ ಬೆಳೂರು ಭೇಟಿ ಮಾಡಿ ಸಾಂತ್ವನ ಹೇಳಿದರು.
ಮರಳು ಸಾಗಿಸುತ್ತಿದ್ದ ಟಿಪ್ಪರ್ವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅರ್ಚನಾ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದಲ್ಲಿ ಅವರ ತಂದೆ ನೀಲಕುಮಾರ್ ಜೈನ್ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರ್ಚನಾ ಜೈನ್ ಅವರು ಉಡುಪಿಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸಕ್ಕೆ ತೆರಳುವ ಮುನ್ನ ತಂದೆ ನೀಲಕುಮಾರ್ ಜೈನ್ ಅವರು ಮಗಳನ್ನು ಬಸ್ಗೆ ಕಳುಹಿಸಲು ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿತ್ತು.
ದುಃಖದಲ್ಲಿರುವ ಕುಟುಂಬದೊಂದಿಗೆ ನಿಂತ ಶಾಸಕ ಗೋಪಾಲಕೃಷ್ಣ ಬೆಳೂರು ಅವರು ಕುಟುಂಬಸ್ಥರಿಗೆ ಧೈರ್ಯ ತುಂಬಿ, ಆರ್ಥಿಕ ನೆರವು ನೀಡಿದರು. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದಿಂದ ದೊರೆಯಬಹುದಾದ ನೆರವು ಹಾಗೂ ಅಗತ್ಯ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್