ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ
Young IPS officer Bhanu Prakash J. has been appointed as the new DySP of Thirthahalli, taking charge with immediate effect following the retirement of Aravind Kalagujji.
ತೀರ್ಥಹಳ್ಳಿ: ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಭಾನುಪ್ರಕಾಶ್ ಜೆ. ಅವರನ್ನು ಸರ್ಕಾರ ನೇಮಕ ಮಾಡಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತೀರ್ಥಹಳ್ಳಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಕೆಲಕಾಲದಿಂದ ಖಾಲಿ ಇದ್ದ ಡಿವೈಎಸ್ಪಿ ಹುದ್ದೆಗೆ ಹೊಸ ಅಧಿಕಾರಿಯ ನೇಮಕವಾದಂತಾಗಿದೆ.
ಭಾನುಪ್ರಕಾಶ್ ಜೆ. ಅವರು ಕರ್ನಾಟಕ ಕೇಡರ್ನ 2023-24ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು, ಮೂಲತಃ ಬೆಂಗಳೂರಿನವರು. ತೀರ್ಥಹಳ್ಳಿ ಉಪವಿಭಾಗಕ್ಕೆ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ನಿಯೋಜಿತರಾಗಿರುವ ಅವರು, ಇದೀಗ ಡಿವೈಎಸ್ಪಿ ಹುದ್ದೆಯ ಜವಾಬ್ದಾರಿಯನ್ನೂ ವಹಿಸಿಕೊಳ್ಳಲಿದ್ದಾರೆ.
ಈ ಹಿಂದೆ ತೀರ್ಥಹಳ್ಳಿ ಡಿವೈಎಸ್ಪಿಯಾಗಿದ್ದ ಅರವಿಂದ ಕಲಗುಜ್ಜಿ ಅವರು ನಿವೃತ್ತರಾದ ಬಳಿಕ ಹುದ್ದೆ ಖಾಲಿಯಾಗಿತ್ತು. ಇದೀಗ ಯುವ ಐಪಿಎಸ್ ಅಧಿಕಾರಿಯ ನೇಮಕದ ಮೂಲಕ ತೀರ್ಥಹಳ್ಳಿ ಪೊಲೀಸ್ ಉಪವಿಭಾಗಕ್ಕೆ ಹೊಸ ನಾಯಕತ್ವ ದೊರೆತಿದೆ.
ಭಾನುಪ್ರಕಾಶ್ ಜೆ. ಅವರ ನೇಮಕದಿಂದ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಆಡಳಿತಕ್ಕೆ ಮತ್ತಷ್ಟು ಚುರುಕು ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್