ಈಜಲು ನೀರಿಗಿಳಿದಿದ್ದ ವೇಳೆ ಭದ್ರಾ ಚಾನಲ್ನಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಬೆಳಗ್ಗೆ ಅನನ್ಯ ಎಂಬಾಕೆಯ ಶವ ಪತ್ತೆಯಾಗಿತ್ತು.ಬಳಿಕ ರವಿ ಎಂಬವರ ಶವ ಪತ್ತೆಯಾಗಿದೆ.
ನೀರಿನಲ್ಲಿ ಆಟವಾಡುವಾಗ ಕಾಲು ಜಾರಿ ಲಕ್ಕವಳ್ಳಿ ಡ್ಯಾಮ್ ಸಮೀಪದ ಭದ್ರಾ ಕಾಲುವೆಯಲ್ಲಿ ಮೂವರು ಕೊಚ್ಚಿಕೊಂಡು ಹೋಗಿದ್ಧರು.
ಮೃತರನ್ನು ಲಕ್ಕವಳ್ಳಿ ಮೂಲದ ರವಿ (31), ಶಿವಮೊಗ್ಗ ಮೂಲದ ಹದಿನಾರು ವರ್ಷದ ಅನನ್ಯ ಹಾಗೂ ಚಾಮರಾಜನಗರ ಜಿಲ್ಲೆ, ನಂಜನಗೂಡು ಮೂಲದ 19 ವರ್ಷದ ಶಾಮವೇಣಿ ಎಂದು ಗುರುತಿಸಲಾಗಿದೆ.
ಮೃತ ಶಾಮವೇಣಿ ಹಾಗೂ ಅನನ್ಯ ಮೃತ ರವಿಯ ಸಹೋದರಿಯರ ಮಕ್ಕಳು. ಶಾಲಾ ಕಾಲೇಜಿಗೆ ರಜೆ ಇದ್ದ ಹಿನ್ನೆಲೆ ಲಕ್ಕವಳಿಗೆ ಆಗಮಿಸಿದ್ದರು. ಎಲ್ಲರು ಲಕ್ಕವಳ್ಳಿ ಡ್ಯಾಮ್ ಪಕ್ಕದ ಭದ್ರಾ ಕಾಲುವೆ ಬಳಿ ತೆರಳಿದ್ದಾರೆ. ಅಲ್ಲಿಯೇ ಬಹಳ ಹೊತ್ತು ಕಳೆದಿದ್ದಾರೆ. ಈ ಮಧ್ಯೆ ಕಾಲು ಜಾರಿ ಒಬ್ಬರು ನೀರಿಗೆ ಬಿದ್ದಿದ್ದಾಳೆ. ಆಕೆಯನ್ನ ರಕ್ಷಿಸಲು ಹೋದ ಇನ್ನೊಬ್ಬಳು, ಸಹೋದರಿಯರ ಮಕ್ಕಳನ್ನ ರಕ್ಷಿಸಲು ಮುಂದಾದ ರವಿ ಮೂವರು ಸಹ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.
ಘಟನೆ ಬೆನ್ನಲ್ಲೆ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಸ್ಥಳಕ್ಕೆ ಭೇಟಿಕೊಟ್ಟಿದ್ದು, ಕಾರ್ಯಾಚರಣೆ ನಡೆಸುತಿದ್ದಾರೆ.
ಕಾಲುವೆಯ ಈ ನೀರು ಅತಿ ವೇಗವಾಗಿ ಹರಿಯುತ್ತಿದ್ದರಿಂದ, ಮೃತದೇಹ ಶೋಧ ಕಾರ್ಯ ಕಷ್ಟವಾಗಿತ್ತು.ಸತತ 10 ಗಂಟೆಯ ಕಾರ್ಯಾಚರಣೆ ಬಳಿಕ ಇಬ್ಬರ ಮೃತದೇಹ ಪತ್ತೆಯಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್